ಮನೆ ರಾಜ್ಯ ಕರ್ನಾಟಕ ಹವಾಮಾನ; 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

ಕರ್ನಾಟಕ ಹವಾಮಾನ; 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

0

ಬೆಂಗಳೂರು : ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್​​, ವಿಜಯಪುರ ಮತ್ತು ಬಳ್ಳಾರಿಯಲ್ಲಿ ವಿಪರೀತ ಉಷ್ಣ ವಾತಾವರಣ ಇರಲಿದ್ದು, ಸುಮಾರು 42 ಡಿಗ್ರಿ ಸೆಲ್ಸಿಯಸ್​​ ವರೆಗೆ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೆಯೇ ಉತ್ತರ ಒಳನಾಡು ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಚಾಮರಾಜನರ, ದಾವಣಗೆರೆ, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲೂ ಸಣ್ಣ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ.

ಉಳಿದಂತೆ ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಳ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ನಾಳೆ ಬಿಸಿಲಿನ ವಾತಾವರಣ ಇರಲಿದ್ದು ನಗರದ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್​ ಇರಲಿದ್ದರೆ, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಹಗಲಿನ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆಯಾದರೂ ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಅಂದಾಜಿಸಲಾಗಿದೆ. ಗಾಳಿಯ ವೇಗ ಗಂಟೆಗೆ 6.4ರಿಂದ 16 ಕಿಲೋ ಮೀಟರ್​​ ವರೆಗೆ ಇರಲಿದೆ.