ಕಾರವಾರ: ಹಳಿಯಾಳ ತಾಲೂಕಿನ ಕರ್ಲಕಟ್ಟಾ ಗ್ರಾಮ ವ್ಯಾಪ್ತಿಯಲ್ಲಿರುವ ಹೊಲದಲ್ಲಿ ಹಳಿಯಾಳ ಅರಣ್ಯ ವಿಭಾಗದ ದಿನಗೂಲಿ ನೌಕರ, ಹವ್ಯಾಸಿ ಉರಗ ಸಂರಕ್ಷಕ ಪರಶುರಾಮ ನಾರಾಯಣ ತೋರಸ್ಕರ ಅವರ ಎರಡೂ ಕಾಲುಗಳನ್ನು ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಕರ್ಲಕಟ್ಟಾ ಗ್ರಾಮದಲ್ಲಿ ಮೂರು ಎಕರೆ ಕೃಷಿ ಜಮೀನಿಗೆ ಸಂಬಂಧಿಸಿದಂತೆ ಕೊಲೆಯಾದ ಪರಶುರಾಮ ತೋರಸ್ಕರ ಹಾಗೂ ಸಹದೇವ ಹನುಮಂತ ದಡ್ಡಿಕರ ಎಂಬವರ ಮಧ್ಯೆ ಗಲಾಟೆಯಾಗಿದ್ದು, ಜಮೀನು ವ್ಯಾಜ್ಯದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಗುರುವಾರ ಇದೇ ವಿವಾದಿತ ಕೃಷಿ ಜಮೀನಿನಲ್ಲಿಯೇ ಪರಶುರಾಮರ ಕಾಲು ಕತ್ತರಿಸಿದ್ದು, ತೀವ್ರ ರಕ್ತಸ್ರಾವವಾಗಿ ಹೊಲದಲ್ಲಿಯೇ ಸಾವನ್ನಪ್ಪಿದ್ದಾರೆ.
ಪ್ರಕರಣದ ಕುರಿತು ಮೃತರ ಸಹೋದರ ತುಕಾರಾಮ ನಾರಾಯಣ ತೋರಸ್ಕರ ಹಳಿಯಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಎಸ್.ಪಿ.ವಿಷ್ಣುವರ್ದನ.ಎಸ್. ಹಳಿಯಾಳ ಠಾಣೆಗೆ ಸಂಜೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ದಾಂಡೇಲಿ ಡಿವೈಎಸ್’ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಸುರೇಶ ಶಿಂಗಿಯವರ ಮುಂದಾಳತ್ವದಲ್ಲಿ ಪಿಎಸ್ ಐ ವಿನೋದ ರೆಡ್ಡಿ, ಅಪರಾಧ ವಿಭಾಗದ ಪಿಎಸ್ ಐ ಅಮಿತ ಅತ್ತಾರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.