ಮನೆ ರಾಷ್ಟ್ರೀಯ ಕಾಶ್ಮೀರ ಪಂಡಿತ್ ನೌಕರನ ಗುಂಡಿಕ್ಕಿ ಹತ್ಯೆ

ಕಾಶ್ಮೀರ ಪಂಡಿತ್ ನೌಕರನ ಗುಂಡಿಕ್ಕಿ ಹತ್ಯೆ

0

ಶ್ರೀನಗರ (Srinagar)- ಕಾಶ್ಮೀರ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಶಂಕಿತ ಉಗ್ರರು ಗುಂಡಿಕ್ಕಿ ಕೊಂದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ನಡೆದಿದೆ.

ಶಂಕಿತ ಉಗ್ರರು ತೆಹಸಿಲ್ ಕಚೇರಿಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದೂಕುಧಾರಿಗಳು ಚದೂರ ಪಟ್ಟಣದ ತೆಹಸಿಲ್ ಕಚೇರಿಗೆ ನುಗ್ಗಿ, ಕ್ಲರ್ಕ್ ರಾಹುಲ್ ಭಟ್ ಮೇಲೆ ಗುಂಡು ಹಾರಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬದ್ಗಾಮ್ ಜಿಲ್ಲೆಯ ಶೇಖ್‌ಪುರದ ವಲಸಿಗ ಕಾಲೋನಿಯಲ್ಲಿ ವಾಸಿಸುತ್ತಿದ್ದ ಭಟ್ ಅವರನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎಂದು ಅವರು ತಿಳಿಸಿದ್ದಾರೆ.

ದಾಳಿಕೋರರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಹಿಂದಿನ ಲೇಖನನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ಮುಂದಿನ ಲೇಖನಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯರನ್ನು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ