ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾ ರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟ ರು ಎಂದರು.
ಕೆಂಪೇಗೌಡರ ಆಡಳಿತ ನಮಗೆ ಪ್ರೇರಣೆ
ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು. ಕೆಂಪೇಗೌಡರ ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.