ಮನೆ ಅಪರಾಧ ಸಾಲ ವಸೂಲಿಗೆ ಉದ್ಯಮಿಯ ಅಪಹರಣ: ಕೆಲವೇ ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸಾಲ ವಸೂಲಿಗೆ ಉದ್ಯಮಿಯ ಅಪಹರಣ: ಕೆಲವೇ ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

0

ಮೈಸೂರು: ವ್ಯಾಪಾರದಲ್ಲಿ ನೀಡಿದ್ದ ಸಾಲದ ಹಣ ವಸೂಲಿ ಮಾಡಲು ಉದ್ಯಮಿಯನ್ನು ಹಾಡುಹಗಲೇ ಕಿಡ್ನಾಪ್ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ನಡೆದಿದ್ದು, ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Join Our Whatsapp Group

ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳದಕೇರಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಪ್ರಕಾಶ್(35) ಎಂಬುವವರು ಅಪಹರಣವಾದ ಉದ್ಯಮಿ.

ರಾಜಾಸ್ಥಾನ್ ಮೂಲದ ದುಗ್ಗರ್ ಸಿಂಗ್,ಬದ್ದಾರಾಮ್ ಸೇರಿದಂತೆ 5 ಮಂದಿ ಅಪಹರಣಕಾರರನ್ನು ಲಷ್ಕರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ ?

ಹಳ್ಳದಕೇರಿಯಲ್ಲಿ ಲಲಿತಾ ಕಿಚನ್ ಸಪ್ಲೈಯರ್ಸ್ ಹೆಸರಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಪ್ರಕಾಶ್ ಕೆಲವು ದಿನಗಳ ಹಿಂದೆ ದುಗ್ಗರ್ ಸಿಂಗ್ ನಿಂದ ತಮಿಳುನಾಡಿನ ವ್ಯಾಪಾರಿಯೊಬ್ಬರಿಗೆ 5.6 ಲಕ್ಷ ಮೌಲ್ಯದ ಗುಟ್ಕಾ ಕೊಡಿಸಿದ್ದರು. ತಮಿಳುನಾಡಿನ ವ್ಯಾಪಾರಿ ಹಣ ಹಿಂದಿರುಗಿಸುವಲ್ಲಿ ವಿಳಂಬ ಮಾಡಿದ್ದರು. ಗುಟ್ಕಾ ಹಣಕ್ಕಾಗಿ ದುಗ್ಗರ್ ಸಿಂಗ್ ಒತ್ತಾಯ ಮಾಡುತ್ತಿದ್ದರು.ಇದೇ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು. ಜೂನ್ 26 ರಂದು ಪ್ರಕಾಶ್ ತಮ್ಮ ಅಂಗಡಿಯಲ್ಲಿ ಕುಳಿತಿದ್ದ ವೇಳೆ ದುಗ್ಗರ್ ಸಿಂಗ್ ,ಬದ್ದಾರಾಮ್ ಸೇರಿದಂತೆ ನರಪತ್ ಸಿಂಗ್, ಸುಜನ್ ರಾಮ್, ಜಮ್ತಾ ರಾಮ್ ಎಂಬುವವರು ಪ್ರಕಾಶ್ ರನ್ನು ಬಲವಂತವಾಗಿ ಕಾರಿನಲ್ಲಿ ಅಪಹರಿಸಿದ್ದಾರೆ. ಪಕ್ಕದ ಅಂಗಡಿಯವರು ಘಟನೆಯನ್ನ ಕಂಡು ಲಷ್ಕರ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಅಲರ್ಟ್ ಆದ ಲಷ್ಕರ್ ಠಾಣಾ ಪೊಲೀಸರು ಉದ್ಯಮಿ ಪ್ರಕಾಶ್ ರ ರಕ್ಷಣೆಗೆ ಮುಂದಾಗಿದ್ದಾರೆ.

ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ಮಾರ್ಗದರ್ಶನದಲ್ಲಿ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಬಿ.ಬಿ.ಸಂತೋಷ್ ನೇತೃತ್ವದಲ್ಲಿ ಎಸ್ಸೈ ಅನಿಲ್, ಸಿಬ್ಬಂದಿಗಖಾದ ಚೇತನ್, ಚಿನ್ನಪ್ಪ, ಮಂಜು, ಕಿರಣ್, ಮಹದೇವಸ್ವಾಮಿ, ಪ್ರದೀಪ್, ರಾಥೋಡ್, ಬಾಬು, ಪ್ರಕಾಶ್ ರವರನ್ನೊಳಗೊಂಡ ತಂಡ ರಚನೆ ಮಾಡಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆನೇಕಲ್ ತಾಲೂಕಿನ ಜಿಗಣಿಯ ಕಟ್ಟಡವೊಂದರಲ್ಲಿ ಪ್ರಕಾಶ್ ರನ್ನ ಬಂಧಿಸಿಟ್ಟಿರುವ ಕುರಿತು ಮಾಹಿತಿ ಕಲೆ ಹಾಕಿದ ಸಂತೋಷ್ ಅಂಡ್ ಟೀಂ ದಾಳಿ ನಡೆಸಿದೆ.

ದಾಳಿ ವೇಳೆ ಪ್ರತಿರೋಧಿಸಿದ 5 ಅಪಹರಣಕಾರರನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಪಹರಣಕಾರರ ಬಂಧನದಲ್ಲಿದ್ದ ಉದ್ಯಮಿ ಪ್ರಕಾಶ್ ರನ್ನ ಲಷ್ಕರ್ ಠಾಣಾ ಪೊಲೀಸರು ಸೇಫ್ ಆಗಿ ಕರೆತಂದಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಹಿಂದಿನ ಲೇಖನನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ
ಮುಂದಿನ ಲೇಖನಸಾರಿಗೆ ಇಲಾಖೆಯ ಅತೀ ಸುರಕ್ಷಾ ನೋಂದಣಿ ಫಲಕ ಯೋಜನೆಯು ಜಾರಿಗೆ ಮುನ್ನವೇ ಅವ್ಯವಹಾರಕ್ಕೆ ನಾಂದಿ: ದೂರು ದಾಖಲು