ಬೆಂಗಳೂರು: ಮದ್ಯದ ನಶೆಯಲ್ಲಿ ಕೈ ನೋಡಿ ಕೆಟ್ಟದಾಗಿ ಭವಿಷ್ಯ ಹೇಳಿದ ಕಾರಣಕ್ಕಾಗಿ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಗೋವಿಂದರಾಜನಗರದ ನಿವಾಸಿ ನರೇಶ್ (34) ಕೊಲೆಯಾದವ. ಮುತ್ತುರಾಜ್ ಪರಾರಿಯಾಗಿರುವ ಆರೋಪಿ.
ನರೇಶ್ ಗಾರೆ ಕೆಲಸ ಮಾಡುತ್ತಿದ್ದರೆ ಮುತ್ತುರಾಜ್ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಬ್ಬರೂ ತಮ್ಮ ಸಹಚರರ ಜತೆಗೆ ಶುಕ್ರವಾರ ಬೆಳಗ್ಗೆ ಗೋವಿಂದರಾಜನಗರ ಠಾಣಾ ವ್ಯಾಪ್ತಿಯ ಬಾರ್ ವೊಂದಕ್ಕೆ ಹೋಗಿ ಮದ್ಯಪಾನ ಮಾಡಿದ್ದರು. ಕುಡಿದ ಮತ್ತಿನಲ್ಲಿ ನರೇಶ್ ಸ್ನೇಹಿತ ಮುತ್ತುರಾಜ್ ಕೈ ನೋಡಿ ಭವಿಷ್ಯ ಹೇಳುವುದಾಗಿ ತಮಾಷೆ ಮಾಡಿದ್ದ. ಬಳಿಕ ಕೆಟ್ಟದಾಗಿ ಭವಿಷ್ಯ ನುಡಿದಿದ್ದ. ಇದರಿಂದ ಆಕ್ರೋಶಗೊಂಡ ಮುತ್ತುರಾಜ್ ಬಾರ್ ನಿಂದ ಹೊರ ಬಂದ ಬಳಿಕ ನರೇಶ್ ಜತೆಗೆ ಜಗಳವಾಡಿದ್ದ. ರಸ್ತೆ ಬದಿ ಬಿದ್ದಿದ್ದ ಕಲ್ಲು ಎತ್ತಿಕೊಂಡು ನರೇಶ್ ಮುಖಕ್ಕೆ ಗುದ್ದಿದ್ದ. ಇದರಿಂದ ನರೇಶ್ ಗಾಯಗೊಂಡು ಮೃತಪಟ್ಟಿದ್ದಾನೆ.
ಇತ್ತ ನರೇಶ್ ಮೃತಪಟ್ಟಿರುವುದು ದೃಢಪಡುತ್ತಿದ್ದಂತೆ ಆರೋಪಿ ಮುತ್ತುರಾಜ್ ತಲೆಮರೆಸಿಕೊಂಡಿದ್ದು, ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.