ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ನಗರದ ಬಾರಾ ಹಿಲ್ಸ್ ಬಳಿ ನಡೆದಿದೆ.
ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದ ನಿವಾಸಿ ಪ್ರಮೋದ್(24) ಕೊಲೆಯಾದ ಯುವಕ.
ಟ್ರಾನ್ಸ್ ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದ ಪ್ರಮೋದ್, ಕಲಬುರಗಿ ನಗರದ ಪೂಜಾ ಕಾಲೋನಿಯಲ್ಲಿರುವ ಸಂಬಂಧಿಕರ ವಾಸಿಸುತ್ತಿದ್ದ. ನಿನ್ನೆ(ಮೇ 21) ರಾತ್ರಿ ಪ್ರಮೋದ್ ತನ್ನ ಮಾವ ಅವಿನಾಶ್ ಜತೆಗೆ ಮನೆಗೆ ಬರುವಾಗ ಕೊಲೆಯಾಗಿ ಹೋಗಿದ್ದಾನೆ.
ತಡರಾತ್ರಿ ಪ್ರಮೋದ್ ಮಾವನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಜೀಪ್ ಸವಾರರೊಂದಿಗೆ ಜಗಳ ಏರ್ಪಟ್ಟಿದೆ. ಮಹಿಂದ್ರಾ ಥಾರ್ ಜೀಪ್ ನಲ್ಲಿ ಹೋಗುತ್ತಿದ್ದ ಯುವಕರು ಎರಡು ಕಡೆ ಇಂಡಿಕೇಟರ್ ಹಾಕಿ ಗೊಂದಲ ಮಾಡುತ್ತಿದ್ದರು. ಸುಮಾರು ಒಂದೂವರೆ ಕಿ.ಮೀ ವರೆಗೆ ಇದೆ ರೀತಿ ಸತಾಯಿಸುತ್ತಿದ್ದರು.
ಇದರಿಂದ ತೊಂದರೆ ಅನುಭವಿಸುತ್ತಿದ್ದ ಬೈಕ್ ಸವಾರ ಪ್ರಮೋದ್, ಇಂಡಿಕೇಟೆರ್ ಸರಿಯಾಗಿ ಹಾಕುವಂತೆ ಹೇಳಿದ್ದಾನೆ. ಈ ವೇಳೆ ಜೀಪ್ ನಿಂದ ಇಳಿದು ಬಂದು ಚಾಕು ಇರಿದು ಹತ್ಯೆ ಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಸಂಬಂಧ ಎಂ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.