ಕೊಡಗು: ಪೊನ್ನಂಪೇಟೆ ತಾಲೂಕಿನ ಚೂರಿಕಾಡು ಗ್ರಾಮದ ಕಾಫಿ ತೋಟದಲ್ಲಿ ಇಬ್ಬರನ್ನು ಕೊಂದು ಆತಂಕ ಸೃಷ್ಟಿಸಿದ್ದ ಹುಲಿಯನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ನಿನ್ನೆಯಿಂದ ಅರಣ್ಯ ಇಲಾಖೆ ಹುಲಿ ಸೆರೆಗೆ ಸುತ್ತಲಿನ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮಾಡುತ್ತಿತ್ತು.ಇಂದು ಮುಂಜಾನೆಯಿಂದಲೇ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ, ಶಾರ್ಪ್ ಶೂಟರ್, ವೈದ್ಯರು ಮತ್ತು 100 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳ 8 ತಂಡ ಮಾಡಿ ಹುಡುಕಾಟ ಆರಂಭಿಸಿತ್ತು.
ಅಲ್ಲದೇ ಅಭಿಮನ್ಯು ನೇತೃತ್ವದ 4 ಸಾಕಾನೆಗಳನ್ನು ತಂದು ಹುಲಿ ಸೆರೆಗೆ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅ ಇಬ್ಬರನ್ನು ಬಲಿಪಡೆದ ಸ್ಥಳದಲ್ಲಿ ಬೋನ್ ಇಡಲಾಗಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ಸಕಲ ಕ್ರಮಗಳನ್ನು ಕೈಗೊಂಡಿತ್ತು.
ಹುಲಿ ಉಪವಲಯ ಅರಣ್ಯಾಧಿಕಾರಿ ರಂಜನ್ ಅವರ ಕಣ್ಣಿಗೆ ಕಾಣಿಸಿಕೊಂಡಿದೆ. ಆಗ ತಕ್ಷಣವೇ ಅವರು ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಸ್ವಲ್ಪ ದೂರು ಸಾಗಿದ ಹುಲಿ ಪ್ರಜ್ಞೆ ತಪ್ಪಿ ಬಿದ್ದಿತು. ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಕೂರ್ಗಳ್ಳಿಯ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.