ಮನೆ ಅಪರಾಧ ಕೋಲಾರ: ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

ಕೋಲಾರ: ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

0

ಕೋಲಾರ(Kolar): ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಗಾರಪೇಟೆ ತಹಶೀಲ್ದಾರ್​ ದಯಾನಂದ್ ಅವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಇನ್ನು ಸಕ್ಕನಹಳ್ಳಿ ಗ್ರಾಮದ ಸರ್ವೆ ನಂ 29 ನಲ್ಲಿ ರವಿ ಸಿಂಗ್ ಎಂಬುವರು ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ಕಾಂಪೌಂಡ್ ನಿರ್ಮಿಸಿಕೊಂಡಿದ್ದರು.

ಈ ಸಂಬಂಧ ತಹಶೀಲ್ದಾರ್ ಅವರಿಗೆ ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆ ತಹಶೀಲ್ದಾರ್​ ದಯಾನಂದ್ ಅವರು, ಜಿಲ್ಲಾ ಭೂಮಾಪನ ಅಧಿಕಾರಿಗಳಿಂದ ಸರ್ವೆ ನಡೆಸಿ, ಒತ್ತುವರಿದಾರರಿಗೆ ಎರಡು ಬಾರಿ ನೋಟಿಸ್ ನೀಡಿದ್ರು ಪ್ರತಿಕ್ರಿಯೆ ನೀಡದ ಹಿನ್ನೆಲೆ ಇಂದು ಒತ್ತುವರಿ ತೆರವಿಗೆ ಮುಂದಾಗಿದ್ದರು.

ಈ ವೇಳೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ್ದಲ್ಲದೇ ತಹಶೀಲ್ದಾರ್​ ದಯಾನಂದ್ ಅವರ ಮೇಲೆ ಒತ್ತುವರಿದಾರ ರವಿಸಿಂಗ್ ಕಲ್ಲುಗಳಿಂದ ಹಲ್ಲೆ ನಡೆಸಲು ಮುಂದಾದ ವೇಳೆ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಬಿಎಸ್ ವೈ ಅವರು ರಾಜ್ಯದ ಜನರ ಹೃದಯ ಸಿಂಹಾಸನದಲ್ಲಿದ್ದಾರೆ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಹನೂರು ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಮತ್ತು ಬಿ. ವೆಂಕಟೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ