ಟಿಕೆಟ್ ಘೋಷಣೆಗೂ ಮುನ್ನ ಭಾರಿ ಕಗ್ಗಂಟಾಗಿ ಪರಿಣಮಿಸಿದ್ದ ಕೋಲಾರ ಮೀಸಲು ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು 67 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಬಹುತೇಕ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೋಲಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು 63 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಮಲ್ಲೇಶ್ ಬಾಬು 6,68,831 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್ ಸೋಲನುಭವಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಕೆ.ವಿ. ಗೌತಮ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಎನ್ಡಿಎ ಅಭ್ಯರ್ಥಿಯಾಗಿ ಮಲ್ಲೇಶ್ಬಾಬು ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು. ಸದ್ಯದ ಫಲಿತಾಂಶ ಉಭಯ ನಾಯಕರಲ್ಲಿ ಎದೆಬಡಿತ ಹೆಚ್ಚಿಸಿತ್ತು. ಜೆಡಿಎಸ್ನ ಮಲ್ಲೇಶ್ ಬಾಬು ಮುನ್ನಡೆ ಸತತವಾಗಿ ಸಾಧಿಸಿ, ಇದೀಗ ಗೆಲುವಿನ ನಗೆ ಬೀರಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ಎಂಟೂ ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ಮೇಲುಗೈ ಇದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ.
ಚುನಾವಣಾ ಘೋಷಣೆಯಾದ ದಿನದಿಂದ ಉಭಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತದಾರರ ಗಮನ ಸೆಳೆದಿದ್ದರು. ಕೇಸರಿ ಅಭ್ಯರ್ಥಿ ಬಿಜೆಪಿ-ಜೆಡಿಎಸ್ ಮೈತ್ರಿಯ ಎನ್ಡಿಎ ಅಭ್ಯರ್ಥಿ ಮಲ್ಲೇಶ್ಬಾಬು ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೈ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಆದಿಯಾಗಿ ಹಲವರು ಭರ್ಜರಿ ಪ್ರಚಾರ ಕೈಗೊಂಡಿದ್ದರು. ಎಲ್ಲ ಘಟಾನುಘಟಿಗಳು ಕ್ಷೇತ್ರದ ಮತದಾರರ ಗಮನ ಸೆಳೆಯುಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಭದ್ರತೆ: ಫಲಿತಾಂಶದ ಹಿನ್ನೆಲೆ ಮತ ಎಣಿಕೆ ಕೇಂದ್ರ ಮತ್ತು ನಗರದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಸಿಪಿಗಳು, ಸಿಪಿಐ, ಪಿಎಸ್ಐ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಣಿಕೆ ಕೇಂದ್ರ ಸೇರಿದಂತೆ ಎಲ್ಲಡೆ ಸಿಸಿಟಿವಿಗಳನ್ನು ಅಳವಡಿಸಲಾಗಿತ್ತು. ಯಾವುದೇ ರೀತಿ ಅಹಿತಕರ ಘಟನೆಗಳು ಸಂಭವಿಸದಂತೆ ತೀವ್ರ ನಿಗಾ ವಹಿಸಲಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.