ಮನೆ ಅಪರಾಧ ಕೋಲಿ ಕಬ್ಬಲಿಗ ಸಮಾಜದ ಮುಖಂಡನ ಹತ್ಯೆ

ಕೋಲಿ ಕಬ್ಬಲಿಗ ಸಮಾಜದ ಮುಖಂಡನ ಹತ್ಯೆ

0

ಕಲಬುರಗಿ: ಕೋಲಿ ಕಬ್ಬಲಿಗ ಸಮಾಜದ ತಾಲ್ಲೂಕು ಘಟಕದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಮುತ್ಯಾಲ (65) ಅವರನ್ನು ಇಂದು ಬೆಳಿಗ್ಗೆ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಅವರು ತಮ್ಮ ವಿಷ್ಣು ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಿತ್ಯ ರಾತ್ರಿ ಮಲಗುತ್ತಿದ್ದರು. ಕೊಲೆಯಾದ ಮಲ್ಲಿಕಾರ್ಜುನ ಜೆಡಿಎಸ್ ಪಕ್ಷದಲ್ಲಿದ್ದರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವವರಿದ್ದರು. ಸೋಮವಾರ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಿವಕುಮಾರ ಪಾಟೀಲ ತೇಲ್ಕೂರ, ಸಿಪಿಐ ಆನಂದರಾವ್, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿದರು.

ಹಿಂದಿನ ಲೇಖನಪ್ರತಾಪ್ ಸಿಂಹ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಮುಂದಿನ ಲೇಖನಜಾರಿ ನಿರ್ದೇಶನಾಲಯದ ಪ್ರಕರಣಗಳಲ್ಲಿ 51 ಸಂಸದರು, 71 ಶಾಸಕರು ಆರೋಪಿಗಳು: ಸುಪ್ರೀಂ ಕೋರ್ಟ’ಗೆ  ಅಮಿಕಸ್ ಕ್ಯೂರಿ ಮಾಹಿತಿ