ಮೈಸೂರು: ಆದಿತ್ಯ ಆಸ್ಪತ್ರೆಯ ಅಧಿಕಾರಿ ಡಾ.ಚಂದ್ರಶೇಖರ್ ಕೆ.ಪಿ.ಎಂ.ಇ ಕಾಯ್ದೆಯ ಕಲಂ 15(5) ಹಾಗೂ 19(1) ಉಲ್ಲಂಘಿಸಿರುವುದರಿಂದ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕೆಂದು ಕೆಪಿಎಂಇ ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಅಧ್ಯಕ್ಷರು ಆದೇಶಿಸಿದ್ದಾರೆ.
ಅಲ್ಲದೇ ಡಾ.ಚಂದ್ರಶೇಖರ್’ಗೆ ನೋಟಿಸ್ ನೀಡಿ, ಅಲ್ಲಿನ ರೋಗಿಗಳನ್ನು ಸ್ಥಳಾಂತರಿಸಲು ಗಡುವು ನೀಡಿ ಆಸ್ಪತ್ರೆಯನ್ನು ಬೀಗಮುದ್ರೆಗೊಳಿಬೇಕೆಂದು ಆದೇಶದಲ್ಲಿ ಸೂಚಿಸಿದ್ದಾರೆ.
ರವಿ ಗೌಡ ಎಂಬುವವರು ಬೆಂಗಳೂರಿನ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸೇವೆಗಳು, ಜಾಗೃತ ಕೋಶ ಮುಖ್ಯ ಜಾಗೃತಾಧಿಕಾರಿಗಳಿಗೆ ಆದಿತ್ಯ ಆಸ್ಪತ್ರೆ ಅಧಿಕಾರಿ ವಿರುದ್ಧ ನೀಡಿದ ದೂರಿನ ಕುರಿತಾದ ತನಿಖಾ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹ ನಿರ್ದೇಶಕರು ಸಲ್ಲಿಸಿದ್ದಾರೆ.
ತನಿಖಾ ವರದಿಯಲ್ಲಿ 10 ದೂರಿನ ಅಂಶಗಳನ್ನು ಉಲ್ಲೇಖಿಸಿ ಅದರಲ್ಲಿ ತನಿಖೆಯಲ್ಲಿ ಗುರುತಿಸಿದ ಅಂಶಗಳು ಮತ್ತು ದಾಖಲೆಗಳನ್ವಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅದರಲ್ಲಿ 5 ಅಂಶಗಳು ಆದಿತ್ಯ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರಾಗಿರುವ ಡಾ.ಚಂದ್ರಶೇಖರ್ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಆಡಳಿತಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಆದಿತ್ಯ ಆಸ್ಪತ್ರೆಯ ಅಧಿಕಾರಿ ಡಾ.ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿ, ಆಸ್ಪತ್ರೆಯನ್ನು ಬೀಗಮುದ್ರೆಗೊಳಿಸಲು ಆದೇಶ ನೀಡಲಾಗಿದೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.