ಮನೆ ಅಪರಾಧ ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆ ಅಕ್ರಮ:  ಜಾಮೀನು ಪಡೆದು ಹೊರ ಬಂದ ಅಭ್ಯರ್ಥಿ ಬಂಧನ

ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆ ಅಕ್ರಮ:  ಜಾಮೀನು ಪಡೆದು ಹೊರ ಬಂದ ಅಭ್ಯರ್ಥಿ ಬಂಧನ

0

ಬೆಳಗಾವಿ(Belagavi): ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್’ಪಿನ್ ಸಂಜೀವ ಭಂಡಾರಿ, ಜಾಮೀನು ಪಡೆದು ಹೊರಬರುತ್ತಿದ್ದಂತೆಯೇ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿ ಸಂಜೀವ ಅವರನ್ನು ಸೆ.3ರಂದು ಬಂಧಿಸಲಾಗಿತ್ತು.  ಸಂಜೀವ ಸೇರಿದಂತೆ ಎಲ್ಲ 20 ಆರೋಪಿಗಳೂ ಇಲ್ಲಿನ ಹಿಂಡಲಗಾ ಜೈಲಿನಲ್ಲಿದ್ದರು. ಸೋಮವಾರ ಇವರ ಅರ್ಜಿ ವಿಚಾರಣೆ ನಡೆಸಿದ ಗೋಕಾಕದ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಸಂಜೀವ ಜಾಮೀನು ಪಡೆದು ಜೈಲಿನಿಂದ ಹೊರ ಬರುತ್ತಿದ್ದಂತೆ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಯನ್ನು ಆರು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

2021ರಲ್ಲಿ ನಡೆದ ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲೂ ಸಂಜೀವ ಅಕ್ರಮ ಎಸಗಿರುವ ಆರೋಪದಲ್ಲಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದು ಮತ್ತೆ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಕೂಡ ಅಭ್ಯರ್ಥಿಗಳಿಗೆ ಸ್ಮಾರ್ಟ್ ವಾಚ್ ನೀಡಿ ಅಕ್ರಮ ಎಸಗುವ ಡೀಲ್ ಮಾಡಿದ ಆರೋಪ ಅವರ ಮೇಲಿದೆ.

ಹಿಂದಿನ ಲೇಖನನಿಮಗೆ ಸೊಂಟ, ಭುಜ ನೋವು ಇದೆಯೇ ಹಾಗಾದ್ರೆ ಕರಿಬೇವಿನ ಎಲೆ ಸೇವಿಸಿ
ಮುಂದಿನ ಲೇಖನಜೂಲನ್ ಗೋಸ್ವಾಮಿ ಪಾತ್ರದಲ್ಲಿ ಅನುಷ್ಕಾ ಶರ್ಮಾ: ಈಡನ್‌ ಗಾರ್ಡನ್‌ ಅಂಗಳದಲ್ಲಿ ಚಿತ್ರೀಕರಣ