ಮನೆ ರಾಜ್ಯ ಕೆಪಿಟಿಸಿಎಲ್‌ ಪ್ರಶ್ನೆ ಪತ್ರಿಕೆ ಸೋರಿಕೆ: ತಂದೆ-ಮಗನ ಬಂಧನ

ಕೆಪಿಟಿಸಿಎಲ್‌ ಪ್ರಶ್ನೆ ಪತ್ರಿಕೆ ಸೋರಿಕೆ: ತಂದೆ-ಮಗನ ಬಂಧನ

0

ಗದಗ (Gadaga): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆಗಾಗಿ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ತಂದೆ-ಮಗ ಇಬ್ಬರನ್ನು ಬೆಳಗಾವಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಗದಗಿನ ಮುನ್ಸಿಪಲ್‌ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತ್‌ ಕುಮಾರ್‌ ಬಂಧಿತ ಆರೋಪಿಗಳು.

ನಗರದ ಮುನ್ಸಿಪಲ್‌ ಕಾಲೇಜು ಸೇರಿದಂತೆ ಅವಳಿ ನಗರದ 21 ಕಡೆಗಳಲ್ಲಿ ಆ.7ರಂದು ಪರೀಕ್ಷೆ ನಡೆದಿತ್ತು. ಗದಗದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ಚುರುಕುಗೊಳಿಸುತ್ತಿದ್ದಂತೆ, ತಂದೆ– ಮಗ ಪ್ರಶ್ನೆಪತ್ರಿಕೆ ಸೋರಿಕೆಗೆ ಕೈ ಜೋಡಿಸಿದ್ದಾರೆ ಎಂಬ ವಿಚಾರ ಬಹಿರಂಗವಾಗಿತ್ತು.

ಪತ್ರಕರ್ತನ ಸೋಗಿನಲ್ಲಿ ಮುನ್ಸಿಪಲ್‌ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಸಮೀತ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆ ಫೋಟೋ ತೆಗೆದುಕೊಂಡಿದ್ದಾನೆ. ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಫೋಟೋವನ್ನು ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೂ ಕಳಿಸಿರುವ ಸಾಧ್ಯತೆಗಳಿವೆ ಎಂದು ಸೈಬರ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಹಿಂದಿನ ಲೇಖನಜಲನೇತಿ ಯೋಗಾಸನದ ಉಪಯೋಗಗಳು
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ