ಮನೆ ರಾಜ್ಯ ಕೆ‌ಆರ್‌ಎಸ್ ಮುತ್ತಿಗೆಗೆ ಯತ್ನ:ಕನ್ನಡಪರ ಸಂಘಟನೆ ಮುಖಂಡರ ಬಂಧನ

ಕೆ‌ಆರ್‌ಎಸ್ ಮುತ್ತಿಗೆಗೆ ಯತ್ನ:ಕನ್ನಡಪರ ಸಂಘಟನೆ ಮುಖಂಡರ ಬಂಧನ

0

ಶ್ರೀರಂಗಪಟ್ಟಣ:ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆ ಆರ್ ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ.


ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇಧಿಕೆ, ಕರ್ನಾಟಕ ರಕ್ಷಣಾ ವೇಧಿಕೆ ಸ್ವಾಭಿಮಾನಿ ಬಣ ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರುಗಳನ್ನು ಪೊಲೀಸರು ಬಂದಿಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ್ದ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಜಲಾಶಯದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.
ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟಿಸಿ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರು ನಡೆದ ಮಾತಿನ ಚಕಮಕ್ಕೆ ನಡೆಯಿತು. ಕನ್ನಡಪರ ಸಂಘಟನೆ ಹೋರಾಟಗಾರರನ್ನು ಬಲವಂತವಾಗಿ ಪೊಲೀಸರು ವಾಹನದಲ್ಲಿ ತುಂಬಿಕೊಂಡು ಹೋದರು.
ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿತ್ತು.

ಹಿಂದಿನ ಲೇಖನವಿಶ್ವಕಪ್ ​ಗೆ 15 ಸದಸ್ಯರ ಟೀಂ ಇಂಡಿಯಾವನ್ನು ಹೆಸರಿಸಿದ ಗಂಗೂಲಿ
ಮುಂದಿನ ಲೇಖನಅನಸ್ತೇಶಿಯಾ ಸ್ಪೆಷಲಿಸ್ಟ್ ಎಂದು ಟ್ರೀಟ್ ಮೆಂಟ್: 15 ಲಕ್ಷ ರೂ. ಪರಿಹಾರಕ್ಕೆ ಮೈಸೂರು ಜಿಲ್ಲಾ ಗ್ರಾಹಕರ ವೇದಿಕೆ ಆದೇಶ