ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್’ಎಸ್ ಜಲಾಶಯದ ನೀರಿನ ಮಟ್ಟ 81.03 ಅಡಿಗೆ ಕುಸಿದಿರುವ ಪರಿಣಾಮ ಹಿನ್ನೀರಿನಲ್ಲಿ ಮುಳುಗಿದ್ದ ಐತಿಹಾಸಿಕ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಗೋಚರಿಸುತ್ತಿದೆ.
ಜಲಾಶಯ ನಿರ್ಮಾಣದ ವೇಳೆ ಸ್ಥಳಾಂತರಿಸದೆ ಹಾಗೇ ಬಿಟ್ಟಿದ್ದ ಶಿಲಾ ದೇಗುಲ ಸಂಪೂರ್ಣ ಗೋಚರಿಸುತ್ತಿದೆ. 2019ರ ನಂತರ ದೇವಾಲಯ ಮತ್ತೆ ಪೂರ್ಣ ಪ್ರಮಾಣದಲ್ಲಿ ಕಾಣುತ್ತಿದೆ. ಮೈಸೂರು ತಾಲ್ಲೂಕಿನ ಆನಂದೂರು ಮತ್ತು ಮಲ್ಲೇಗೌಡನಕೊಪ್ಪಲು ವ್ಯಾಪ್ತಿಯಲ್ಲಿರುವ ದೇವಾಲಯವನ್ನು ಜನ ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ದೇವಾಲಯದ ಬಳಿ ಸೆಲ್ಫಿ ತೆಗೆದುಕೊಳ್ಳುವುದು, ಸುತ್ತಲೂ ವಿಹರಿಸುವುದು ಸಾಮಾನ್ಯವಾಗಿದೆ.
ಜಲಾಶಯಕ್ಕೆ ಶುಕ್ರವಾರ 448 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ ಮತ್ತು ನಾಲೆಗಳಿಗೆ 3,009 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. 49 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 11.37 ಟಿಎಂಸಿ ಅಡಿಗಳಷ್ಟು ನೀರಿದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 104.8 ಅಡಿ ನೀರಿತ್ತು. 2,900 ಕ್ಯುಸೆಕ್ ಒಳ ಹರಿವು, 2,387 ಕ್ಯುಸೆಕ್ ಹೊರ ಹರಿವು ದಾಖಲಾಗಿತ್ತು. 26.81 ಟಿಎಂಸಿ ಅಡಿಗಳಷ್ಟು ನೀರಿ ಸಂಗ್ರಹ ಇತ್ತು. ಜಲಾಶಯದ ನೀರಿನ ಮಟ್ಟ 72 ಅಡಿಗೆ ಕುಸಿದರೆ ಹಿನ್ನೀರಿನಲ್ಲಿ ಮುಳುಗಿರುವ ಕಣ್ಣೇಶ್ವರ ದೇವಾಲಯ ಗೋಚರಿಸಲಿದೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.