ಮನೆ ಅಪರಾಧ ಕೆಎಸ್’ಆರ್’ಟಿಸಿ ಬಸ್- ಕಾರ್ ನಡುವೆ ಅಪಘಾತ: ಮೂವರ ಸಾವು

ಕೆಎಸ್’ಆರ್’ಟಿಸಿ ಬಸ್- ಕಾರ್ ನಡುವೆ ಅಪಘಾತ: ಮೂವರ ಸಾವು

0

ತುಮಕೂರು(Tumakur): ತಿಪಟೂರು ತಾಲ್ಲೂಕಿನ ತಿಮ್ಲಾಪುರ- ಮತ್ತೀಹಳ್ಳಿ ಗೇಟ್ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ  ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಮೃತರು ಶಿರಾ ಸಮೋಪದ ಕಡವಗೆರೆ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ.

ಕಾರಿನಲ್ಲಿದ್ದವರು ಧರ್ಮಸ್ಥಳಕ್ಕೆ ಹೋಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು,  ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಎದುರಿಗೆ ಬರುತ್ತಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದೆ.

ಹಿಂದಿನ ಲೇಖನಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪತಿ
ಮುಂದಿನ ಲೇಖನಶೆಡ್ ಮೇಲೆ ಗುಡ್ಡ ಕುಸಿತ:  ಮೂವರ ಸಾವು, ಓರ್ವನ ಸ್ಥಿತಿ ಗಂಭೀರ