ಮನೆ ರಾಜ್ಯ ಕೆಎಸ್ ಆರ್ ಟಿಸಿ ಬಸ್ ಚಾಲಕ ಆತ್ಮಹತ್ಯೆ ಪ್ರಕರಣ ತನಿಖೆ:  ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೆಎಸ್ ಆರ್ ಟಿಸಿ ಬಸ್ ಚಾಲಕ ಆತ್ಮಹತ್ಯೆ ಪ್ರಕರಣ ತನಿಖೆ:  ಗೃಹ ಸಚಿವ ಡಾ.ಜಿ.ಪರಮೇಶ್ವರ್

0

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಚಾಲಕ ಜಗದೀಶ್  ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕುರಿತು ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.

Join Our Whatsapp Group

ಈ ಕುರಿತು ಸದನದಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ನಿಷ್ಪಕ್ಷಪಾತವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ ಇಂದು ವಿಧಾನಮಂಡಲ ಉಭಯಸದನದಲ್ಲೂ ಪ್ರತಿಧ್ವನಿಸಿತು. ಈ ಕುರಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಪ್ರಕರಣ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದರು.

ಈ ಕೇಸ್ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಸತ್ಯ ಹೊರಗೆ ಬರಲಿ. ಸರ್ಕಾರಿ ಬಸ್ ಚಾಲಕನ ಕುಟುಂಬಕ್ಕೆ ನ್ಯಾಯ, ರಕ್ಷಣೆ ಕೊಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸದನದಲ್ಲಿ ಒತ್ತಾಯಿಸಿದರು.

ಹಿಂದಿನ ಲೇಖನಸೆಟ್ಟೇರಿದ ನಟ ಧನುಷ್ ಅಭಿನಯದ 50ನೇ ಸಿನಿಮಾ
ಮುಂದಿನ ಲೇಖನಕಾರಿಗೆ ಬಸ್ ಡಿಕ್ಕಿ: ಮೂವರ ಸಾವು, 8 ಮಂದಿಗೆ ಗಾಯ