ಮನೆ ರಾಜ್ಯ ಕಮಲಾಪುರ ಬಳಿ ಕೆಎಸ್’ಆರ್’ಟಿಸಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

ಕಮಲಾಪುರ ಬಳಿ ಕೆಎಸ್’ಆರ್’ಟಿಸಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

0

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ತಾಲ್ಲೂಕಿನ ಕಿಣ್ಣ ಸಡಕ್ ಸಮೀಪದಲ್ಲಿ ನಡೆದಿದೆ.

Join Our Whatsapp Group

ಬಸ್ ನಲ್ಲಿ 43 ಜನ ಪ್ರಯಾಣಿಕರಿದ್ದು, ಈ ಪೈಕಿ ನಾಲ್ವರಿಗೆ ಸಣ್ಣ–ಪುಟ್ಟ ಗಾಯಗಳಾಗಿವೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ–ಹೈದರಾಬಾದ್ ನಡುವೆ ಸಂಚರಿಸುತ್ತಿದ್ದ ಬಸ್, ಸೋಮವಾರ ಬೆಳಿಗ್ಗೆ ಹೈದರಾಬಾದ್ ನಿಂದ ಕಲಬುರಗಿಗೆ ಬರುತ್ತಿತ್ತು. ಬೆಳಿಗ್ಗೆ 5.30ರ ಸುಮಾರಿಗೆ ಕಿಣ್ಣ ಸಡಕ ಬಳಿ ಸಾಗುತ್ತಿತ್ತು. ದರ್ಗಾ ಸಮೀಪ ಹೊಡ್ಡು ಹಾಗೂ ಹೆದ್ದಾರಿಯ ತಿರುವಿದೆ. ಎದುರಿಗೆ ವೇಗವಾಗಿ ಲಾರಿ ಬರುತ್ತಿದ್ದು ಡಿಕ್ಕಿ ಆಗುವ ಸಂಭವವಿತ್ತು. ಡಿಕ್ಕಿ ತಪ್ಪಿಸಲು ಚಾಲಕ ಬ್ರೇಕ್ ಹಾಕಿ ಪಕ್ಕಕ್ಕೆ ತೆರಳಲು ಪ್ರಯತ್ನಿಸಿದ್ದ. ಆಗ ಆಯ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಹೇಳಿದ್ದಾರೆ.

ಹೆದ್ದಾರಿಗೆ ಅಡ್ಡಲಾಗಿ ಬಸ್ ಬಿದ್ದಿರುವುದರಿಂದ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಪಿಐ ವಿ. ನಾರಾಯಣ, ಪಿಎಸ್’ಐ ವಿಶ್ವನಾಥ ಮುದ್ದಾರೆಡ್ಡಿ, ಕುಪೇಂದ್ರ, ರಾಜಶೇಖರ ನಾಶಿ ಅವರು ಸ್ಥಳಕ್ಕೆ ಭೇಟಿ ನೀಡಿ, ಪಲ್ಟಿಯಾಗಿ ಬಿದ್ದ ಬಸ್ ತೆರವುಗೊಳಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಹಿಂದಿನ ಲೇಖನIPL 2023 Final: ಫೈನಲ್ ಪಂದ್ಯದ ಟಾಸ್ ಗೆದ್ದ ಧೋನಿ- ಗುಜರಾತ್ ಬ್ಯಾಟಿಂಗ್
ಮುಂದಿನ ಲೇಖನಟಿ.ನರಸೀಪುರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ