ಮನೆ ಅಪರಾಧ ಮೈಸೂರು: ಕೆಎಸ್’ಆರ್’ಟಿಸಿ ಬಸ್ ಚಕ್ರ ಹರಿದು ಬಾಲಕ ಸಾವು

ಮೈಸೂರು: ಕೆಎಸ್’ಆರ್’ಟಿಸಿ ಬಸ್ ಚಕ್ರ ಹರಿದು ಬಾಲಕ ಸಾವು

0

ಮೈಸೂರು(Mysuru): ಕೆಎಸ್​’ಆರ್​’ಟಿಸಿ ಬಸ್ಸಿನ ಚಕ್ರ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡು ಪಟ್ಟಣದ ಹಳೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಪ್ರಜ್ವಲ್(14) ಮೃತ ಬಾಲಕ.

ನಂಜನಗೂಡು-ಹುಲ್ಲಹಳ್ಳಿ-ಹಂಪಾಪುರಕ್ಕೆ ಸಂಚರಿಸುವ ಸಾರಿಗೆ ಬಸ್ ಇದಾಗಿತ್ತು. ನಂಜೀಪುರ ಗ್ರಾಮದ ಪ್ರಕಾಶ್ ಮತ್ತು ಪುತ್ರ ಪ್ರಜ್ವಲ್ ಇಬ್ಬರೂ ಗ್ರಾಮಕ್ಕೆ ತೆರಳುವಾಗ ದುರ್ಘಟನೆ ಸಂಭವಿಸಿದೆ.

ಬಸ್ ಸಂಚರಿಸುವ ಸಮಯದಲ್ಲಿ ಮುಂದಿನ ಬಾಗಿಲಿನಿಂದ ಇಳಿಯುತ್ತಿದ್ದಾಗ ಪ್ರಜ್ವಲ್ ಕೆಳಗೆ ಬಿದ್ದಿದ್ದಾನೆ. ಹಿಂಬದಿಯ ಚಕ್ರ ಆತನ ಹೊಟ್ಟೆಯ ಮೇಲೆ ಹರಿದಿದೆ. ಪರಿಣಾಮ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತಕ್ಷಣ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ, ಆಂಬ್ಯುಲೆನ್ಸ್‌ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬರಲೇ ಇಲ್ಲ. ಈ ಸಂದರ್ಭದಲ್ಲಿ ಮೃತ ಬಾಲಕನ ತಂದೆಯ ಆಕ್ರಂದನ ಮುಗಿಲು ಮುಟ್ಟಿತ್ತು.

ನಂತರ ಆಟೋ ಮೂಲಕ ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಒಕ್ಕಲಿಗರಿಗೂ ಮೀಸಲಾತಿಯಲ್ಲಿ ಪಾಲು ಸಿಗಬೇಕು: ನಂಜಾವಧೂತ ಸ್ವಾಮೀಜಿ
ಮುಂದಿನ ಲೇಖನಕ್ಯಾನ್ಸರ್ ರೋಗಿಯ ಜಾಮೀನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗೆ ₹1 ಲಕ್ಷ ದಂಡ ವಿಧಿಸಿದ ಸುಪ್ರೀಂ ಕೋರ್ಟ್