ಶಿವಮೊಗ್ಗ : ನೂತನ ಸೇತುವೆ ಉದ್ಘಾಟನೆಯಾದ ಬೆನ್ನಲ್ಲೇ ಬೆಂಗಳೂರಿನಿಂದ ಸಿಗಂದೂರಿಗೆ ಕೆಎಸ್ಆರ್ಟಿಸಿ Non-AC ಬಸ್ ಸಂಚಾರ ಆರಂಭವಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು ಮತ್ತು ಸಿಗಂದೂರು ನಡುವೆ ಹೊಸದಾಗಿ ನಾನ್ ಎಸಿ ಸ್ಲೀಪರ್ ಬಸ್ ಪ್ರಾರಂಭಿಸಿದೆ. ಇಂದು (ಆ.22) ಸಂಚಾರ ಆರಂಭಿಸಿದೆ. ಬೆಂಗಳೂರಿನಿಂದ ರಾತ್ರಿ 9:40ಕ್ಕೆ ಹೊರಟು ಚಿತ್ರದುರ್ಗ, ಹೊಳಲ್ಕೆರೆ, ಚನ್ನಗಿರಿ, ಮತ್ತು ಶಿವಮೊಗ್ಗ ತಲುಪಲಿದೆ. ಬಳಿಕ ಸಿಗಂದೂರನ್ನು ಬೆಳಗ್ಗೆ 6 ಗಂಟೆಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸಿಗಂದೂರು ಕಡೆಯಿಂದ ರಾತ್ರಿ 8 ಗಂಟೆಗೆ ಹೊರಡಲಿದ್ದು, ಬೆಂಗಳೂರಿಗೆ ಬೆಳಗಿನ ಜಾವ 4:15 ಕ್ಕೆ ತಲುಪಲಿದೆ. ಟಿಕೆಟ್ ದರ 950 ರೂ. ನಷ್ಟಿದೆ. ಟಿಕೆಟ್ಗಳನ್ನು KSRTCಯ ಅಧಿಕೃತ ವೆಬ್ಸೈಟ್ಗಳಾದ www.ksrtc.in ಮತ್ತು www.ksrtc.karnataka.gov.in ಮೂಲಕ ಕಾಯ್ದಿರಿಸಬಹುದು. ಮಾಹಿತಿಗಾಗಿ 080-26252625, 7760990100,7760990560, 7760990287 ನಂಬರ್ಗಳನ್ನು ಸಂಪರ್ಕಿಬಹುದು ಎಂದು ತಿಳಿಸಿದೆ.
ಬಸ್ ಸಂಚಾರದಿಂದ ಬೆಂಗಳೂರಿನಿಂದ ಸಿಗಂದೂರು ದೇವಾಲಯಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಅಲ್ಲದೇ ಒಂದೇ ದಿನದಲ್ಲಿ ಸಿಗಂದೂರು ಸಮೀಪದ ಕೆಲವು ಪ್ರವಾಸಿ ತಾಣಗಳಲ್ಲಿ ಸುತ್ತಿ ವಾಪಸ್ ಬರುವ ಅವಕಾಶ ಸಿಕ್ಕಂತಾಗಿದೆ.














