ಉಡುಪಿ ಜಿಲ್ಲೆಯಲ್ಲಿರುವ ರಾಜ್ಯದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನಿರ್ದೇಶಿಸಿ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶ ಮಾಡಿದೆ.
ದೇವಾಲಯ ಸುತ್ತಲಿನ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಗುರು ಪ್ರಸಾದ್ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ.
ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ಅವರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ದೇವಾಲಯ ಸುತ್ತಲಿನ ಸರ್ವೇ ನಂಬರ್ 12ರಲ್ಲಿ ಭೂಮಿ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಈ ಯೋಜನೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ ಮೂರು ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲದ ಕಟ್ಟಡಕ್ಕೆ ಅಪಾಯಕ್ಕೆ ಸಿಲುಕಲಿದೆ ಎಂದು ಪೀಠಕ್ಕೆ ವಿವರಿಸಿದರು.
ಈ ವಾದ ಪರಿಗಣಿಸಿದ ಪೀಠವು ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸೂಚಿಸಿದೆ.
ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ದೇವಾಲಯ ಸುತ್ತಲಿನ ಸರ್ವೇ ನಂ 12ರಲ್ಲಿನ ಜಮೀನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು 2023ರ ಅಕ್ಟೋಬರ್ 10 ರಂದು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಗೆ ಆಕ್ಷೇಪಿಸಿ ತಾವು 2023ರ ಅಕ್ಟೋಬರ್ 26ರಂದು ಸಲ್ಲಿಸಿರುವ ಮನವಿ ಪತ್ರವನ್ನು ಸಚಿವಾಲಯ ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಅಧಿಸೂಚನೆ ಪ್ರಕಾರ ದೇವಸ್ಥಾನದ ಸಮೀಪದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಈ ಮಾರ್ಗದಲ್ಲಿ ನಿತ್ಯ 15 ಸಾವಿರಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತದೆ. ಇದರಿಂದ ದೇವಸ್ಥಾನದ ಕಟ್ಟಡಕ್ಕೆ ಅಪಾಯ ಒದಗಲಿದೆ. ಗರ್ಭಗುಡಿ ಕಂಪಿಸಲಿದೆ. ಹಾಗೆಯೇ, ದೇವಸ್ಥಾನದ ಧಾರ್ಮಿಕ ರಥೋತ್ಸವ ನೇರವೇರಿಸಲು ಅಡ್ಡಿ ಸೇರಿದಂತೆ ಅನೇಕ ಸಮಸ್ಯೆ ಉಂಟಾಗಲಿವೆ. ಹೀಗಾಗಿ, ಸಚಿವಾಲಯದ ಅಧಿಸೂಚನೆ ರದ್ದುಪಡಿಸಬೇಕು. ದೇವಾಲಯದ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿರ್ಬಂಧ ಹೇರಬೇಕು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಪರ್ಯಾರ್ಯ ಮಾರ್ಗ ಕಂಡುಕೊಳ್ಳುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.