ಕಲಬುರ್ಗಿಯಲ್ಲಿ ಇತ್ತೀಚೆಗೆ ನಡೆದ ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ ಅವರ ಹತ್ಯೆ ಘಟನೆ ನಿಜಕ್ಕೂ ವ್ಯವಸ್ಥೆಗೆ ಬೆದರಿಕೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.
ಸಿವಿಲ್ ವ್ಯಾಜ್ಯವೊಂದರ ಸಂಬಂಧ ವಿಚಾರಣೆ ವೇಳೆ ಈರಗಣ್ಣ ಗೌಡರ ಹತ್ಯೆ ಘಟನೆಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿ ವಿ ಶ್ರೀಷಾನಂದ ಅವರ ನೇತೃತ್ವದ ಏಕಸದಸ್ಯ ಪೀಠವು 20 ಎಕರೆ ಜಾಗದ ಮೇಲಿನ ಹಕ್ಕಿನ ವಿಚಾರ ಸಂಬಂಧ ಈ ಕೊಲೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲದೇ, ಇಂತಹ ಘಟನೆಗಳನ್ನು ಮಟ್ಟಹಾಕದೆ ಹೋದರೆ ಮುಂದಿನ 20 ವರ್ಷಗಳ ನಂತರ ಸಿವಿಲ್ ವ್ಯಾಜ್ಯಗಳು ಕೋರ್ಟ್ಗೆ ದಾಖಲಾಗುವುದು ಅನುಮಾನ, ಕೊಲೆಗಡುಕರು ಮುಂದೊಂದು ದಿನ ಶ್ರೀಸಾಮಾನ್ಯರನ್ನು ಬೆದರಿಸಿ ಸಿವಿಲ್ ವ್ಯಾಜ್ಯಗಳನ್ನು ತಾವೇ ಇತ್ಯರ್ಥ ಮಾಡಿಕೊಳ್ಳುತ್ತಾರೆ. ಈ ಹೇಯ ಕೃತ್ಯಗಳು ನಿಜಕ್ಕೂ ವ್ಯವಸ್ಥೆಗೆ ಬೆದರಿಕೆಯಾಗಿದೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ಹೇಳಿದ್ದಾರೆ.
ಡಿಸೆಂಬರ್ 7ರಂದು ಕಲಬುರ್ಗಿಯ ಸಾಯಿ ಮಂದಿರ ಅಪಾರ್ಟ್ಮೆಂಟ್ ಬಳಿ ವಕೀಲ ಈರಣ್ಣಗೌಡ ಪಾಟೀಲ್ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಅವರ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.