ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಸಲಿಂಗ ವಿವಾಹಗಳನ್ನು ವಿಶೇಷ ವಿವಾಹ ಕಾಯ್ದೆಯಡಿ ತಂದು ನೋಂದಣಿ ಮಾಡುವಂತೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಆಗ್ರಹ ಕೇಳಿಬಂದಿದೆ.
2018 ರಲ್ಲಿ, ಸುಪ್ರೀಂ ಕೋರ್ಟ್ ನ ಸಂವಿಧಾನ ಪೀಠವು ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಐಪಿಸಿಯ ಸೆಕ್ಷನ್ 377 ರ ಭಾಗವನ್ನು ರದ್ದುಗೊಳಿಸಿದೆ.
ಈ ಕಾರಣದಿಂದಾಗಿ, ಇಬ್ಬರು ವಯಸ್ಕರ ನಡುವಿನ ಒಮ್ಮತದ ಸಲಿಂಗಕಾಮಿ ಸಂಬಂಧಗಳನ್ನು ಇನ್ನು ಮುಂದೆ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಸಲಿಂಗ ವಿವಾಹವನ್ನು ಅನುಮೋದಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠ (ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನು ಒಳಗೊಂಡಂತೆ) ಹತ್ತು ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಇದು ನಗರ ಚಿಂತನೆಯಾಗಿದೆ ಎಂದು ಹೇಳಿತ್ತು. ಇದು ದೊಡ್ಡ ನಗರಗಳಲ್ಲಿ ವಾಸಿಸುವ ಕೆಲವು ಗಣ್ಯ ವ್ಯಕ್ತಿಗಳಿಂದ ಬೇಡಿಕೆಯಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಹೇಳಿತ್ತು.
ಈ ಕುರಿತು ಸಿಜೆಐ ಚಂದ್ರಚೂಡ್ ಅವರು, ಸಲಿಂಗ ವಿವಾಹದ ಬೇಡಿಕೆಯು ನಗರ ವರ್ಗಕ್ಕೆ ಮಾತ್ರ ಸೀಮಿತವಾಗಿದೆ ಎಂಬುದನ್ನು ತೋರಿಸುವ ಯಾವುದೇ ಡೇಟಾ ಸರ್ಕಾರದ ಬಳಿ ಇಲ್ಲ ಎಂದು ಹೇಳಿದ್ದರು.
ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ನ್ಯಾ. ಭಟ್ ಅವರು ಸಾಂವಿಧಾನಿಕ ಸಿದ್ಧಾಂತವನ್ನು ನಾವು ಉಳಿಸಿಕೊಂಡು ಬಂದಿದ್ದೇವೆ. ಈ ಪ್ರಕರಣದಲ್ಲಿ ನ್ಯಾಯಾಲಯವು ನೀತಿಯ ರಚನೆ ಕುರಿತು ಶಾಸಕಾಂಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಮತ್ತು ನೀತಿ ರಚನೆಯ ಕ್ಷೇತ್ರವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅರ್ಜಿಯಲ್ಲೇನಿತ್ತು? ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು. ಇದಕ್ಕೆ ಪೂರಕವಾಗಿ 1954ರ ವಿಶೇಷ ವಿವಾಹ ಕಾಯ್ದೆಯನ್ನು ಮರು ವ್ಯಾಖ್ಯಾನಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 (ಸಿ) ಪುರುಷ ಮತ್ತು ಮಹಿಳೆಯ ವಿವಾಹಕ್ಕೆ ಮಾತ್ರ ಮಾನ್ಯತೆ ನೀಡುತ್ತದೆ. ಇದರಿಂದ ಸಲಿಂಗ ಜೋಡಿಗೆ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡದಿರುವುದು ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಘನತೆಯ ಹಕ್ಕುಗಳ ನಿರಾಕರಣೆಯಾಗಿದೆ ಎಂದು ಹೇಳಲಾಗಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.