ಮನೆ ರಾಜಕೀಯ ಲಿಂಗಾಯಿತರನ್ನೇ ಸಿಎಂ ಮಾಡುತ್ತೇವೆಂದು ಕಾಂಗ್ರೆಸ್ ಘೋಷಿಸಲಿ: ವಿ.ಸೋಮಣ್ಣ ಸವಾಲ್

ಲಿಂಗಾಯಿತರನ್ನೇ ಸಿಎಂ ಮಾಡುತ್ತೇವೆಂದು ಕಾಂಗ್ರೆಸ್ ಘೋಷಿಸಲಿ: ವಿ.ಸೋಮಣ್ಣ ಸವಾಲ್

0

ಚಾಮರಾಜನಗರ: ಕಾಂಗ್ರೆಸ್ ವೀರಶೈವ ಲಿಂಗಾಯತರನ್ನೇ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಸಚಿವ ವಿ.ಸೋಮಣ್ಣ ಸವಾಲ್ ಹಾಕಿದ್ದಾರೆ.

Join Our Whatsapp Group

ಚಾಮರಾಜನಗರದ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಲಿಂಗಾಯತ ವಿರೋಧಿಗಳು ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ವೀರೇಂದ್ರ ಪಾಟೀಲರನ್ನು ತೆಗೆದಿದ್ದು ಯಾರು.? ರಾಜಶೇಖರ ಮೂರ್ತಿ ಅವರನ್ನು ಓಡಿಸಿದ್ದು ಯಾರು.? ನಿಜಲಿಂಗಪ್ಪ ಅವರನ್ನು ದೇಶಬಿಟ್ಟು ಕಳುಹಿಸಿದ್ದು ಯಾರು..? ಲಿಂಗಾಯತರು ಬಿಟ್ಟು ಹೋದಾಗ ಕಾಂಗ್ರೆಸ್’​ಗೆ ಏನಾಯ್ತು..! ಜಗದೀಶ್ ಶೆಟ್ಟರ್, ಸವದಿ ಅಂತ ಹೇಳ್ತಿದ್ದಾರಲ್ಲ, ಜಗದೀಶ್​ ಶೆಟ್ಟರನ್ನು ಮುಖ್ಯಮಂತ್ರಿ ಮಾಡಲಿ..! ಇವೆಲ್ಲಾ ಕಣ್ಣೊರೆಸುವ ತಂತ್ರ ಎಂದು ಕಿಡಿಕಾರಿದರು.

ಲಿಂಗಾಯತರು ದಡ್ಡರಲ್ಲ, ಅವರನ್ನು ಮತ ಬ್ಯಾಂಕ್ ಆಗಿ ಇಟ್ಟುಕೊಂಡು, ಆ ವರ್ಗಗಳಿಗೆ ಕಾಂಗ್ರೆಸ್ ಏನು ಮಾಡಿಲ್ಲ. ಜನರು ಬದಲಾವಣೆ ಬಯಸುತ್ತಿದ್ದಾರೆ. ಲಿಂಗಾಯತರನ್ನು ಬ್ಲ್ಯಾಕ್​ ಮೇಲ್​ ಮೂಲಕ ಏನೋ ಮಾಡುತ್ತೇವೆ ಎಂದು ಆಸೆ ಇಟ್ಟುಕೊಂಡಿದ್ದರೇ ಅವರಿಗೇ ನಿರಾಸೆ ಆಗಲಿದೆ. ಅವರಲ್ಲಿ ಅಷ್ಟು ದೊಡ್ಡ ವಿಷನ್ ಇದ್ದರೆ ಲಿಂಗಾಯತರನ್ನು ಸಿಎಂ ಮಾಡುತ್ತೇವೆಂದು ಹೇಳಲಿ, ಯೂಸ್ ಆ್ಯಂಡ್ ಥ್ರೋ ಮಾತುಗಳು ಬೇಡ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಉತ್ತಮ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಅದಕ್ಕೇ, ಕಾಂಗ್ರೆಸ್ ​ನವರು ಒಂದೊಂದು ಗಂಟೆಗೆ, ಘಳಿಗೆಗೊಂದು ದಾಳ ಹಾಕ್ತಾ ಇದ್ದಾರೆ. ಆದರೆ ಅವೆಲ್ಲಾ ಏನೂ ಆಗಲ್ಲ. ಈ ಬಗ್ಗೆ ಎಲ್ಲವನ್ನೂ ನಿನ್ನೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದ್ಯದ ಪರಿಸ್ಥಿತಿ ಅವಲೋಕಿಸಲಾಗಿದೆ ಎಂದು ಹೇಳಿದರು.

ಬಿ.ಎಲ್. ಸಂತೋಷ್ ಓರ್ವ ಸಕ್ರಿಯ ಕಾರ್ಯಕರ್ತ. 24*7 ಕೆಲಸಗಾರ, ನಾಯಕರನ್ನು ತುಳಿಯುವ ಹುಚ್ಚಿಲ್ಲ. ಕಾಂಗ್ರೆಸ್ ​ನವರಿಗೆ ಮಾತನಾಡಲು ಏನು ಇಲ್ಲ. ಅದಕ್ಕೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು.

ಹಿಂದಿನ ಲೇಖನಮೈಸೂರು: ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವು
ಮುಂದಿನ ಲೇಖನಅಭ್ಯರ್ಥಿಯನ್ನು ಗೆಲ್ಲಿಸಲು ಕುಟುಂಬವರು ಒಂದಾಗಿದ್ದೇವೆ: ಎಚ್‌.ಡಿ. ಕುಮಾರಸ್ವಾಮಿ