ಮನೆ ರಾಜಕೀಯ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಬಿಜೆಪಿಯವರು ನೀಡಿದ ಅನುದಾನ ಬಹಿರಂಗಪಡಿಸಲಿ: ಎಚ್.ಡಿ.ಕುಮಾರಸ್ವಾಮಿ

ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಬಿಜೆಪಿಯವರು ನೀಡಿದ ಅನುದಾನ ಬಹಿರಂಗಪಡಿಸಲಿ: ಎಚ್.ಡಿ.ಕುಮಾರಸ್ವಾಮಿ

0

ಗೋಕರ್ಣ: ಬಿಜೆಪಿಯವರು ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸವಾಲೆಸೆದರು.

ಕುಮಟಾ ವಿಧಾನಸಭಾ ಕ್ಷೇತ್ರದ ಗೋಕರ್ಣದಲ್ಲಿ ಬುಧವಾರ ಪಂಚರತ್ನ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮದವರ ಜತೆ ಅವರು ಮಾತನಾಡಿದರು.

ಬ್ರಾಹ್ಮಣ ಮಹಾಸಭಾಕ್ಕೆ ಕಚೇರಿ ನಿರ್ಮಾಣಕ್ಕೆ ಜಾಗ ಒದಗಿಸಿದ್ದೆ ನಾನು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಿ ₹5 ಕೋಟಿ ಅನುದಾನ ನೀಡಿದ್ದೇನೆ ಎಂದರು.

ಜೆಡಿಎಸ್ ಪಕ್ಷವೂ ಸರ್ವೇ ಜನಾ ಸುಖಿನೋ ಭವಂತು ಘೋಷವಾಕ್ಯವನ್ನೇ ಬಳಸುತ್ತದೆ. ನಾನು ಈ ತತ್ವಕ್ಕೆ ಬದ್ಧರಾಗಿದ್ದೇವೆ ಎಂದರು.

ನಮ್ಮದು ಸಾವರ್ಕರ್ ಡಿ.ಎನ್.ಎ. ಅಲ್ಲ. ಸಾವರ್ಕರ್ ಟಿಪ್ಪು ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿಗೆ ಸಂಬಂಧಿಸಿದ ಜಗಳ. ನಮಗೂ ಅದಕ್ಕೂ ಸಂಬಂಧ ಇಲ್ಲ ಎಂದರು.

ಹಿಂದಿನ ಲೇಖನದೆಹಲಿ ಅಬಕಾರಿ ನೀತಿ ಪ್ರಕರಣ: ಎಂಎಲ್’ಸಿ ಕವಿತಾರ ಮಾಜಿ ಆಡಿಟರ್ ಬಂಧನ
ಮುಂದಿನ ಲೇಖನಪಂಜಾಬ್ ಗಡಿಯೊಳಗೆ ನುಸುಳಿದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್’ಎಫ್