ಬೆಂಗಳೂರು (Bengaluru): ವಿಜಯ್ ದೇವರಕೊಂಡ ಅಭಿನಯದ ‘ಲೈಗರ್’ ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಪ್ರಚಾರವನ್ನು ಸಿನಿಮಾ ತಂಡ ದೊಡ್ಡ ಮಟ್ಟದಲ್ಲಿ ಮಾಡುತ್ತಿದೆ.
ಪ್ರಚಾರದ ಭಾಗವಾಗಿ ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ ಮತ್ತು ಇಡೀ ಚಿತ್ರತಂಡ ಬೆಂಗಳೂರಿಗೆ ಬಂದಿದೆ.
ಬೆಂಗಳೂರಿಗೆ ಬಂದ ‘ಲೈಗರ್’ ಸಿನಿಮಾ ತಂಡ ಡಾ.ಪುನೀತ್ ರಾಜಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಚಿತ್ರತಂಡ ಪುನೀತ್ ಅವರ ಆಶೀರ್ವಾದ ಪಡೆದಿದ್ದಾರೆ.
ಲೈಗರ್’ ಸಿನಿಮಾ ಪ್ಯಾನ್ಇಂಡಿಯಾ ಸಿನಿಮಾ. ಹಾಗಾಗಿ ಕನ್ನಡದಲ್ಲೂ ಕೂಡ ಈ ಸಿನಿಮಾ ತೆರೆಗೆ ಬರುತ್ತಿದೆ. ಹಾಗಾಗಿ ಚಿತ್ರತಂಡ ಬೆಂಗಳೂರಿನಲ್ಲಿ ಪ್ರೀ- ರಿಲೀಸ್ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಂಡಿದೆ. ಮಂತ್ರಿ ಮಾಲ್ನಲ್ಲಿ ‘ಲೈಗರ್’ ಪತ್ರಿಕಾಗೋಷ್ಠಿಯ ಬಳಿಕ ಪ್ರೀ- ರಿಲೀಸ್ ಕಾರ್ಯಕ್ರಮ ಜನರ ಸಮ್ಮುಖದಲ್ಲಿ ಮಾಡಲಾಗುತ್ತದೆ.
ಆಗಸ್ಟ್ 25ಕ್ಕೆ ‘ಲೈಗರ್’ ಸಿನಿಮಾ ವಿಶ್ವದಾದ್ಯಂತ ರಿಲೀಸಾಗುತ್ತಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್ ನಿರ್ದೇಶನವಿದ್ದು, ಚಾರ್ಮಿ ಕೌರ್ ಬಂಡವಾಳ ಹೂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಟ್ರೈಲರ್ ಹಾಡು ಮತ್ತು ಟೀಸರ್ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಈ ಚಿತ್ರದ ಮೂಲಕ ಪ್ಯಾನ್ಇಂಡಿಯಾ ಸ್ಟಾರ್ ಆಗಿ ವಿಜಯ್ ದೇವರಕೊಂಡ ಹೇಗೆ ಮಿಂಚಲಿದ್ದಾರೆ ಎನ್ನುವುದನ್ನು ನೋಡಬೇಕಿದೆ.
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.