ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಕಾಂಗ್ರೆಸ್ ಫೇಕ್ ಫ್ಯಾಕ್ಟರಿಯಿಂದ ಇನ್ನೊಂದು ಫೇಕ್ ಸುದ್ದಿ ಹೊರಬಿದ್ದಿದೆ. ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಜೆಪಿ ನಾಯಕತ್ವ ನಡೆಸುತ್ತಿದೆ. ಪ್ರಜಾತಂತ್ರವೆಂದರೆ ಏನೆಂದು ತಿಳಿಯದ ಗುಲಾಮಿ ಮನಸ್ಥಿತಿಯ ಕಾಂಗ್ರೆಸ್ ಸುಳ್ಳು ಸುದ್ದಿಯನ್ನು ಹರಡುವುದೇ ರಾಜಕೀಯ ಎಂದುಕೊಂಡಿದೆ ಎಂದು ಸಿ.ಟಿ ರವಿ, ಫೇಸ್ ಬುಕ್ ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಅರುಣ್ ಸಿಂಗ್
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದು ಸುಳ್ಳು ಅಭ್ಯರ್ಥಿಗಳ ಪಟ್ಟಿ: ಕಟೀಲ್
ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.