ಮನೆ ರಾಜಕೀಯ ಸಿದ್ದರಾಮಯ್ಯ ನಾಯಕತ್ವದಲ್ಲೇ ಲೋಕಸಭಾ ಚುನಾವಣೆ: ಡಿ.ಕೆ ಶಿವಕುಮಾರ್

ಸಿದ್ದರಾಮಯ್ಯ ನಾಯಕತ್ವದಲ್ಲೇ ಲೋಕಸಭಾ ಚುನಾವಣೆ: ಡಿ.ಕೆ ಶಿವಕುಮಾರ್

0

ಬೆಂಗಳೂರು:  ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ನಮ್ಮ‌ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ.ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.  

ಇನ್ನು ಇದೇ ವೇಳೆ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಸೆ ಪಡುವುದು, ಹೇಳೋದು, ಜನರಿಗೆ ಮನವಿ ಮಾಡುವುದು ಸಾಮಾನ್ಯ. ನಾನು ನನ್ನೂರಿಗೆ ಹೋದಾಗ ನನಗೆ ಶಕ್ತಿ ಕೊಡಿ ಎಂದು ಕೇಳುತ್ತೇನೆ. ಅದು ಸ್ವಾಭಾವಿಕ, ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು. ಯತೀಂದ್ರ ಸೂಕ್ಷ್ಮ ವ್ಯಕ್ತಿ, ಉದ್ಬವ ಆಗುತ್ತಿರುವ ನಾಯಕ. ನಾವು ಅವರಿಗೆ ಸಹಕಾರ ಕೊಡೋಣ. ಬಿಜೆಪಿಯವರು ಅವರ ಪಕ್ಷವನ್ನ ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಹಿಂದಿನ ಲೇಖನಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ 30 ಕೋಟಿ ರೂಪಾಯಿ ಬಿಡುಗಡೆ: ಲಕ್ಷ್ಮೀ ಆರ್ ಹೆಬ್ಬಾಳ್ಕರ್
ಮುಂದಿನ ಲೇಖನರಾಮ ಮಂದಿರ ಉದ್ಘಾಟನೆ ಸಮಾರಂಭದ ವಿರುದ್ಧ ಅಲಾಹಾಬಾದ್ ಹೈಕೋರ್ಟ್‌ ನಲ್ಲಿ ಅರ್ಜಿ