ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ದಾವಣಗೆರೆ: ಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ದಾವಣಗೆರೆ ವಲಯ ಕಚೇರಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ವಿಶೇಷ ಭೂ ಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ಜಿ.ಡಿ. ಶೇಖರ್ ಮತ್ತು ಶಿರಸ್ತೇದಾರ್ ವಿ.ಎ. ಶ್ರೀನಿವಾಸ್ ಲೋಕಾಯುಕ್ತರ ಬಲೆಗೆ ಬಿದ್ದವರು.
ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲೇ ಹಾವೇರಿ ತಾಲೂಕಿನ ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಎಂಬುವರಿಂದ ೩೦ ಸಾವಿರ ರೂಪಾಯಿ ಲಂಚ ಪಡೆದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಸರ್ಕಾರದ ಯೋಜನೆಗೆಂದು ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರಕ್ಕೆ ಇಬ್ಬರು ೩೦ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಬಗ್ಗೆ ಸಂತೋಷ್ ಗುಡ್ಡಪ್ಪನವರ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ .ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕೆ.ಜಿ. ರಾಮಕೃಷ್ಣ, ಇನ್ಸ್ಪೆಕ್ಟರ್ ಎಚ್.ಎಸ್. ರಾಷ್ಟ್ರಪತಿ, ಎನ್.ಎಚ್. ಆಂಜನೇಯ ಅವರನ್ನೊಳಗೊಂಡ ತಂಡ ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.