ಮನೆ ರಾಜಕೀಯ ಸಿದ್ದರಾಮಯ್ಯ ನೂರ್ಕಾಲ ಬದುಕಲಿ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ನೂರ್ಕಾಲ ಬದುಕಲಿ: ಸಿಎಂ ಬೊಮ್ಮಾಯಿ

0

ಚಿಕ್ಕಮಗಳೂರು(Chikkamagaluru): ಭಾವನಾತ್ಮಕವಾಗಿ ಮತ ಕೇಳುತ್ತಿದ್ದಾರೆ. ಅವರಿಗೆ ಏನು ಆಗುವುದು ಬೇಡ, ಅವರು ನೂರು ಕಾಲ ಬದುಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆ ಹಿನ್ನೆಲೆ ಕಡೂರಿಗೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ತಮಗೆ ಆರೋಗ್ಯ ಸರಿ ಇಲ್ಲ. ಬಿಪಿ ಶುಗರ್​ ಇದೆ, ಬಹಳ ದಿನ ಬದುಕಿರ್ತೀನೋ ಇಲ್ವೋ ಗೊತ್ತಿಲ್ಲ. ತಾವು ಸಿಎಂ ಆಗಬೇಕಾದರೆ ನೀವು ಮತ ಹಾಕಲೇಬೇಕು ಎಂದು  ಮತಕೇಳುತ್ತಿದ್ದಾರೆ. ಅವರಿಗೆ ಏನು ಆಗುವುದು ಬೇಡ ಎಂದು ಹೇಳಿದರು.

2013 ರಲ್ಲೂ ಸಿದ್ದರಾಮಯ್ಯ ಅವರು ಇದೇ ರೀತಿ ಹೇಳಿದ್ದರು. ಆಗ ಜನ ಅವರನ್ನು ನಂಬಿ ಮತ ಹಾಕಿದ್ದರು. ಆದರೆ ಸಿದ್ದರಾಮಯ್ಯ ಜನರ ಮತಗಳಿಗೆ ಬೆಲೆ ನೀಡಿಲ್ಲ. ಸಿದ್ದರಾಮಯ್ಯ ಅವರ ಆಡಳಿತ ಕಾಲದಲ್ಲಿ ಕೊಲೆ, ಸುಲಿಗೆ ಜಾಸ್ತಿ ಇತ್ತು. ಈಗ ಜನ ಅವರನ್ನು ನಂಬದೆ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಈಗ ಮತ್ತೆ ಅವರನ್ನು ನಂಬುವ ಸ್ಥಿತಿಯಲ್ಲಿ ಜನ ಇಲ್ಲ. ಕನ್ನಡಿಗರು ಇಂತಹ ಮಾತಿಗೆ ಬೆಲೆ ನೀಡಲ್ಲ. ಕನ್ನಡಿಗರು ವಿಶ್ಲೇಷಣೆ ಮಾಡಿ ಮತ ಹಾಕುತ್ತಾರೆ ಎಂದು ಹೇಳಿದರು.

ಹಿಂದಿನ ಲೇಖನರಿಷಿ ಸುನಕ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ
ಮುಂದಿನ ಲೇಖನಅಪಘಾತದಲ್ಲಿ ಗಂಭೀರ ಅಂಗವೈಕಲ್ಯ: ವಿಮಾ ಪರಿಹಾರವನ್ನು ₹11 ಲಕ್ಷದಿಂದ ₹44 ಲಕ್ಷಕ್ಕೆ ಹೆಚ್ಚಳ ಮಾಡಿದ ಹೈಕೋರ್ಟ್