ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು:ಮೈಸೂರು ಜಿಲ್ಲೆಯ ತಿ ನರಸೀಪುರ ತಾಲ್ಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ನರೇಗಾ ಕಾಮಗಾರಿಗಳನ್ನು ತಾಯಿ ಹೃದಯದಂತೆ ಕಾಣಿ ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಇಂಜಿನಿಯರ್ ಸಿ.ಕೆ.ಮಲ್ಲಪ್ಪ ಅವರು ತಿಳಿಸಿದರು.
ತಾಲ್ಲೂಕಿಗೆ ಬುಧವಾರ ಭೇಟಿ ನೀಡಿದ ಅವರು ಅಮೃತ ಸರೋವರ ಕೆರೆ ಅಭಿವೃದ್ಧಿ ಹಾಗೂ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಮೊದಲಿಗೆ ಮಾದಾಪುರ ಗ್ರಾಮ ಪಂಚಾಯಿತಿಯ ಸಿದ್ದಪ್ಪಾಜಿ ದೇವಸ್ಥಾನದ ಹತ್ತಿರದ ಕಲ್ಯಾಣಿ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಕಲ್ಯಾಣಿಯ ಸುತ್ತಲು ಅರಣ್ಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಗಿಡಗಳನ್ನು ನೆಟ್ಟು ಪೋಷಿಸುವಂತೆ ಸೂಚಿಸಿ ಕಲ್ಯಾಣಿ ಕಾಮಗಾರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ತಲಕಾಡು ಗ್ರಾಮ ಪಂಚಾಯಿತಿಯಲ್ಲಿ ಪ್ರಗತಿ ಹಂತದಲ್ಲಿರುವ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ತಾಂತ್ರಿಕ ಸಹಾಯಕ ಅಭಿಯಂತರರಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡಿದರು.
ಹೊಳೆಸಾಲು ಗ್ರಾಮ ಪಂಚಾಯಿತಿಯ ಮೇದನಿ ಗ್ರಾಮದ ಜವನಕಟ್ಟೆ ಅಮೃತ ಸರೋವರ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ ಏರಿ ನಿರ್ಮಾಣ, ಕೆರೆಯ ಸುತ್ತಳತೆ, ನೀರಿನ ಒಳ ಹರಿವು ಮತ್ತು ಹೊರ ಹರಿವಿನ ಕುರಿತು ಸಲಹೆಯನ್ನು ನೀಡಿ ಒಟ್ಟಾರೆ ನರೇಗಾ ಯೋಜನೆಯ ಸದ್ಬಳಕೆ ಮಾಡಿಕೊಂಡು ಉತ್ತಮವಾದ ಕಾಮಗಾರಿಗಳನ್ನು ನಿರ್ಮಿಸುವಂತೆ ಸೂಚಿಸಿದರು.
ಈ ವೇಳೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಿ. ಕೃಷ್ಣ, ಸಹಾಯಕ ನಿರ್ದೇಶಕರು (ಗ್ರಾ. ಉ) ಶಶಿಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಂತ್ರಿಕ ಸಹಾಯಕ ಅಭಿಯಂತರರು, ಐ ಇ ಸಿ ಸಂಯೋಜಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಿ ಎಫ್ ಟಿ, ಅಧ್ಯಕ್ಷರು ,ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.