ಮನೆ ಅಪರಾಧ ಹುಲಿಕಲ್ ಘಾಟಿಯಲ್ಲಿ ಬೈಕ್’ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಹುಲಿಕಲ್ ಘಾಟಿಯಲ್ಲಿ ಬೈಕ್’ಗೆ ಲಾರಿ ಡಿಕ್ಕಿ: ಇಬ್ಬರ ಸಾವು

0

ಶಿವಮೊಗ್ಗ:  ಬೈಕ್’ಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆ.

ಹುಲಿಕಲ್ ಲಕ್ಶ್ಮಿ ನರಸಿಂಹ ದೇವಸ್ಥಾನ ಸಮೀಪ ಅಪಘಾತ ನಡೆದಿದ್ದು, ಮಾಸ್ತಿಕಟ್ಟೆಯ ಕಂಪನ ಕೈನ ರವಿ ಹಾಗೂ ಅವರ ಅಣ್ಣನ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದಿಂದಾಗಿ ಹುಲಿಕಲ್ ಮಾಸ್ತಿಕಟ್ಟೆ- ಹೊಸಂಗಡಿ ನಡುವೆ ಭಾರೀ ಟ್ರಾಫಿಕ್ ಜಾಮ್ ಆಗಿತ್ತು. ಗಂಭೀರ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ತಕ್ಷಣ ಆಂಬುಲೆನ್ಸ್ ಬರಲಿಲ್ಲ. ಪೊಲೀಸರು ರಕ್ಷಣೆಗೆ ಧಾವಿಸಲಿಲ್ಲ ಎಂದು ಆರೋಪಿಸಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಬಿಎಸ್’ಎನ್’ಎಲ್ ನಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಮುಂದಿನ ಲೇಖನವಂದೇ ಭಾರತ್ ಎಕ್ಸ್‌’ಪ್ರೆಸ್‌ ವಿಶೇಷ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ