ಮಂಡ್ಯ(Mandya): ವಿದ್ಯುತ್ ಕಂಬಕ್ಕೆ ಬಿಯರ್ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಮೈಸೂರು- ಬೆಂಗಳೂರು ಹೆದ್ದಾರಿ ಬಳಿ ಗುರುವಾರ ತಡರಾತ್ರಿ ನಡೆದಿದೆ.
ತಮಿಳುನಾಡು ಮೂಲದ ಏಳುಮಲೈ (60) ಮೃತ ಚಾಲಕ.
ಬೆಂಗಳೂರಿನಿಂದ ಮೈಸೂರಿಗೆ ಬಿಯರ್ ಬಾಟಲಿಗಳನ್ನು ಸಾಗಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಲಾರಿಯಲ್ಲಿ ಬಿಯರ್ ಬಾಟಲ್ ಗಳು ಇದ್ದುದನ್ನು ಗಮನಿಸಿ ಬಾಟಲಿಗಳನ್ನು ಹೊತ್ತೊಯ್ದಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾತಂತರ ಠಾಣಾ ಪೊಲೀಸರು ಭೇಟಿ ಘಟನಾ ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.