ಮನೆ ಅಪರಾಧ ಲಾರಿ ತಡೆದು ಹಣ ವಸೂಲಿ: ಎಎಸ್ ಐ ಸೇರಿದಂತೆ ಇಬ್ಬರು ಪೊಲೀಸರು ಅಮಾನತು

ಲಾರಿ ತಡೆದು ಹಣ ವಸೂಲಿ: ಎಎಸ್ ಐ ಸೇರಿದಂತೆ ಇಬ್ಬರು ಪೊಲೀಸರು ಅಮಾನತು

0

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಎಸ್ ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಆದೇಶ ಹೊರಡಿಸಿದ್ದಾರೆ.

Join Our Whatsapp Group

ಕಳ್ಳಂಬೆಳ್ಳ ಠಾಣೆಯ ಎಎಸ್ ಐ ಚಿದಾನಂದ ಸ್ವಾಮಿ, ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ ಅಮಾನತ್ತಾದ ಅಧಿಕಾರಿಗಳು.

 ಶಿರಾ ಟು ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿಗಳನ್ನು ತಡೆದು 200, 300 ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಈ ವೇಳೆ ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಅದರಲ್ಲಿ ಹಣ ಪಡೆಯುತ್ತಿದ್ದ ಇಬ್ಬರು ಪೊಲೀಸರಿಗೆ ಕ್ಲಾಸ್ ಸಾರ್ವಜನಿಕರು ತೆಗೆದುಕೊಂಡಿದ್ದರು. ಪೊಲೀಸರು ಹಣ ಪಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್ ಪೆಕ್ಟರ್​ಗೆ ಸೂಚನೆ ನೀಡಿದ್ದ ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್.

ವರದಿಯಲ್ಲಿ ಪೊಲೀಸರು ಹಣ ಪಡೆಯುವುದು ಸಾಬೀತಾದ ಹಿನ್ನೆಲೆ ಅಮಾನತು ಆದೇಶ ಹೊರಡಿಸಿದ್ದಾರೆ.