ಮೈಸೂರು(Mysuru): ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕ್ಯಾಂಟೀನ್ ಆಹಾರ ಸೇವಿಸಿ ಸಾಕಷ್ಟು ವಿದ್ಯಾರ್ಥಿನಿಯರು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಮಾತನಾಡಿ, ಕಾಲೇಜಿನ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಅಲ್ಲದೇ ಕ್ಯಾಂಟೀನ್ ಸಿಬ್ಬಂದಿಗಳು ನಮ್ಮೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಆದ್ದರಿಂದ ಕಾಲೇಜಿನ ಆವರಣದಲ್ಲಿರುವ ಕ್ಯಾಂಟೀನ್ ನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರು.
ಪ್ರತಿಭಟನೆಯಲ್ಲಿ ಅಂಬಿಕಾ.ಡಿ.ಎಸ್, ಪೂರ್ವಿಕಾ ಎಂ. ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.