ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಒಲವು ತೋರಿದರೂ ಕೆಲಪುಂಡರು ಪುಂಡಾಟ ಮೆರೆಯುತ್ತಿದ್ದಾರೆ.
ಪುಣೆಯಿಂದ ಅಥಣಿಗೆ ಬರುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಮಹಾರಾಷ್ಟ್ರದ ಗಡಿಯಲ್ಲಿ ಶುಕ್ರವಾರ ರಾತ್ರಿ, ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದು, ಬಸ್ಸಿನ ಮುಂಭಾಗದ ಗಾಜು ಹಾಗೂ ಎರಡು ಕಿಟಕಿ ಒಡೆದಿವೆ.
ಬಸ್ ಸಂಚರಿಸುವ ವೇಳೆಯೇ ಕತ್ತಲಲ್ಲಿ ರಸ್ತೆಗೆ ಅಡ್ಡಬಂದ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾದರು.
ಬಸ್ಸಿನ ಚಾಲಕ ಕುಳಿತಿದ್ದ ಭಾಗದಲ್ಲಿ ಗಾಜು ಒಡೆಯಿತು. ಆದರೂ ಚಾಲಕ ವಾಹನ ನಿಲ್ಲಿಸದೇ ಸುರಕ್ಷಿತವಾಗಿ ದಾಟಿಸಿದರು.
ಮೀರಜ್ ಮಾರ್ಗವಾಗಿ ಸಂಚರಿಸುವ ಕರ್ನಾಟಕದ ಎಲ್ಲ ಬಸ್ ಸಂಚಾರವನ್ನು ಶನಿವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಾಗವಾಡ ಮಾರ್ಗವಾಗಿ ಪ್ರತಿ ದಿನ ಸಾವಿರಾರು ಪ್ರಯಾಣಿಕರು ಮಹಾರಾಷ್ಟ್ರಕ್ಕೆ ತೆರಳುತ್ತಾರೆ. ಕಿಡಿಗೇಡಿಗಳು ಇದೇ ಬಸ್ಸುಗಳನ್ನು ಗರಿಯಾಗಿಸಿ ಗಲಾಟೆ ಮುಂದುವರಿಸಿದ್ದಾರೆ.
ರಾಜ್ಯದ ಬಸ್ಸುಗಳ ಮೇಲೆ ಮಹಾರಾಷ್ಟ್ರದಲ್ಲಿ ದಾಳಿ ಮುಂದುವರಿದ ಕಾರಣ, ಈ ಮಾರ್ಗದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.