ಮಹೀಂದ್ರಾ ಕಂಪನಿಯು ಹೊಸ ಎಕ್ಸ್ ಯುವಿ700 ಎಸ್ ಯುವಿ ಬಿಡುಗಡೆಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದುವರೆಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟಗೊಂಡಿದೆ.
ಎಕ್ಸ್ ಯುವಿ700 ಕಾರು ಮಾದರಿ ಖರೀದಿಗಾಗಿ ಇದುವರೆಗೆ ಸುಮಾರು 2 ಲಕ್ಷಕ್ಕೂ ಹೆಚ್ಚು ಗ್ರಾಹಕರು ಬುಕಿಂಗ್ ದಾಖಲಿಸಿದ್ದು, ಉತ್ಪಾದನಾ ಪ್ರಮಾಣ ಆಧರಿಸಿ ಇದುವರೆಗೆ 1 ಲಕ್ಷ ಗ್ರಾಹಕರಿಗೆ ವಿತರಣೆ ಮಾಡಲಾಗಿದೆ.
2021ರ ಅಂತ್ಯದಲ್ಲಿ ಬಿಡುಗಡೆಗೊಂಡಿದ್ದ ಎಕ್ಸ್ ಯುವಿ700 ಕಾರು ಮಾದರಿಯು ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಬುಕಿಂಗ್ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿತ್ತು. ತದನಂತರದಲ್ಲಿ ಬುಕಿಂಗ್ ಪ್ರಮಾಣವು 2.50 ಲಕ್ಷಕ್ಕೂ ಅಧಿಕ ದಾಖಲಾಗಿದ್ದು, ಇದರಲ್ಲಿ ಇದೀಗ 1 ಲಕ್ಷ ಯುನಿಟ್ ಕಾರುಗಳನ್ನು ಅಧಿಕೃತವಾಗಿ ವಿತರಣೆ ಮಾಡಲಾಗಿದೆ. ಹೊಸ ಕಾರು ಖರೀದಿಗಾಗಿ ಕಂಪನಿಯು ವಿವಿಧ ವೆರಿಯೆಂಟ್ ಗಳನ್ನು ಆಧರಿಸಿ 7 ರಿಂದ 8 ತಿಂಗಳು ಕಾಯುವಿಕೆ ಅವಧಿಯನ್ನು ನಿಗದಿಪಡಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಎಕ್ಸ್ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.01 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 26.18 ಲಕ್ಷ ಬೆಲೆ ಹೊಂದಿದೆ.
ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದ್ದು, ಇದರಲ್ಲಿ 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್ಪಿ ಮತ್ತು 450-ಎನ್ ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.
ಇನ್ನು ಎಕ್ಸ್ ಯುವಿ700 ಮಾದರಿಯಲ್ಲಿ ಕಂಪನಿಯು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ವೆರಿಯೆಂಟ್ ಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಕಾರಿನಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿದೆ. ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಜೊತೆಗೆ 7 ಏರ್ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.