ಮನೆ ರಾಜ್ಯ ಮಹಿಷ ದಸರಾ ವಿರೋಧ: ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್  ಜಾರಿ

ಮಹಿಷ ದಸರಾ ವಿರೋಧ: ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್  ಜಾರಿ

0

ಮೈಸೂರು: ದಲಿತ ಸಮಿತಿಗಳು ಹಾಗೂ ಮಹಿಷ ದಸರಾ ಸಮಿತಿಯವರು ಮಹಿಷ ದಸರಾ ನಡೆಸುತ್ತೇವೆ ಎಂದರೆ ಇತ್ತ ಸಂಸದ ಪ್ರತಾಪ್​ ಸಿಂಹ ನೇತೃತ್ವದಲ್ಲಿ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಡಲಾಗಿತ್ತು. ಆದರೆ  ಜಿಲ್ಲಾಡಳಿತ ಎರಡೂ ಕಾರ್ಯಕ್ರಮಗಳಿಗೆ ಅವಕಾಶ ನಿರಾಕರಿಸಿತ್ತು.

ಇದೀಗ ಮೈಸೂರು ನಗರ ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟ ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಅ.12 ರ ಮಧ್ಯರಾತ್ರಿ 12-00 ಗಂಟೆಯಿಂದ ಅ.14 ರ ಬೆಳಿಗ್ಗೆ 06-00 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ತಿಳಿಸಿದ್ದಾರೆ.

1) ಯಾವುದೇ ಮೆರವಣಿಗೆ, ಪ್ರತಿಭಟನೆ, ರಾಲಿ, ಬೈಕ್ ರಾಲಿ, ನಡೆಸುವುದು. 2) ಪರ ವಿರೋಧ ಘೋಷಣೆ ಕೂಗುವುದು 3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು 4) 05 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು. 5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು. 6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪುಚಾರ, ಧ್ವನಿವರ್ಧಕ ಬಳಸುವುದು, ಫೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದನ್ನು ನಿಷೇಧ ಮಾಡಲಾಗಿದೆ.

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು.

ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ಹಿಂದಿನ ಲೇಖನಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್10ರ ವರೆಗೂ ನೀರು: ಸಚಿವ ಆರ್.ಬಿ ತಿಮ್ಮಾಪೂರ
ಮುಂದಿನ ಲೇಖನನಂಜನಗೂಡು: ಜಡಿ ಮಳೆಗೆ ಆಸ್ಪತ್ರೆ ರೋಗಿಗಳು ಹೈರಾಣ