ಮಳವಳ್ಳಿ: ತಾಲೂಕಿನ ಬಿ.ಜಿ.ಪುರ ಮಂಟೇಸ್ವಾಮಿ ಮಠದ ಹುಂಡಿ, ಮುಟ್ಟನಹಳ್ಳಿ ದೊಡ್ಡಮ್ಮತಾಯಿ ಹಾಗೂ ವಾಸುಹಳ್ಳಿ ಬೋರೆಯಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನಗಳಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಂಟೇಸ್ವಾಮಿ ಮಠದ ಆಡಳಿತಾಧಿಕಾರಿ ಭರತ್ ರಾಜೇ ಅರಸು, ಒಂದು ತಿಂಗಳ ಹಿಂದೆ ಮಂಟೇಸ್ವಾಮಿ ಮಠದಲ್ಲಿದ್ದ ಒಂದು ಹುಂಡಿ ಕಳ್ಳತನವಾಗಿದೆ.
ನಂತರ ಮುಟ್ಟನಹಳ್ಳಿ ದೊಡ್ಡಮ್ಮತಾಯಿ ದೇವಸ್ಥಾನದ ಹುಂಡಿಯನ್ನು ಕಳವು ಮಾಡಿದ್ದಾರೆ. ಕಳ್ಳರು ಹುಂಡಿ ತೆಗೆದುಕೊಂಡು ಹೋಗುವ ದೃಶ್ಯ ಸಿ.ಸಿ.ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಾರದ ಹಿಂದೆ ವಾಸುಹಳ್ಳಿ ಬೋರೆಯಲ್ಲಿರುವ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದೇ ರೀತಿ ಕಳ್ಳತನವಾಗಿರುವುದು ಜನರಲ್ಲಿ ತೀವ್ರ ಆತಂಕವುಂಟು ಮಾಡಿದೆ ಎಂದಿದ್ದಾರೆ.
ಪೊಲೀಸರು ಈ ಬಗ್ಗೆ ಕ್ರಮಕೈಗೊಂಡು ಕಳ್ಳರನ್ನ ಬಂಧಿಸಿ, ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕೆಂದು ಭರತ್ ರಾಜೇ ಅರಸು ದೂರು ನೀಡಿದ್ದಾರೆ.
ಈ ಬಗ್ಗೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಬ್ ಇನ್ಸ್ಪೆಕ್ಟರ್ ಅಶೋಕ್ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಕಳ್ಳತನ ನಡೆದಿರುವ ದೊಡ್ಡಮ್ಮತಾಯಿ ದೇವಸ್ಥಾನವನ್ನು ಪರಿಶೀಲನೆ ನಡೆಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.