ಮನೆ ರಾಜಕೀಯ ಬಲಿಪಶು ಮಾಡುವುದಕ್ಕಾಗಿ ​ಮಲ್ಲಿಕಾರ್ಜುನ ಖರ್ಗೆ ಅವರನ್ನು ಘಟಬಂಧನ್​ ನಾಯಕನನ್ನಾಗಿ ಮಾಡಲಾಗುತ್ತಿದೆ: ಪ್ರಹ್ಲಾದ್ ಜೋಶಿ ಲೇವಡಿ

ಬಲಿಪಶು ಮಾಡುವುದಕ್ಕಾಗಿ ​ಮಲ್ಲಿಕಾರ್ಜುನ ಖರ್ಗೆ ಅವರನ್ನು ಘಟಬಂಧನ್​ ನಾಯಕನನ್ನಾಗಿ ಮಾಡಲಾಗುತ್ತಿದೆ: ಪ್ರಹ್ಲಾದ್ ಜೋಶಿ ಲೇವಡಿ

0

ಹುಬ್ಬಳ್ಳಿ: ಇಂಡಿಯಾ  ಮೈತ್ರಿಕೂಟದಲ್ಲಿ ಹೊಂದಾಣಿಕೆ ಇಲ್ಲ. ಬಲಿಪಶು ಮಾಡುವುದಕ್ಕಾಗಿಯೇ ​ಮಲ್ಲಿಕಾರ್ಜುನ ಖರ್ಗೆ ಅವರನ್ನು ಘಮಂಡಿ ಘಟಬಂಧನ್​ ನಾಯಕನನ್ನಾಗಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

Join Our Whatsapp Group

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ, ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ, ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ, ಉತ್ತರಪ್ರದೇಶ​, ಪಶ್ಚಿಮ ಬಂಗಾಳದಲ್ಲಿ ಕಿತ್ತಾಟ ನಡೆಯುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒಕ್ಕೂಟದಿಂದ ಹೊರ ಬರುವ ವಿಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೋತರೇ ಗಾಂಧಿ ಕುಟುಂಬದ ಮೇಲೆ ಬರಬಾರದು, ಬಲಿಪಶು ಮಾಡಲೆಂದೇ ​ಮಲ್ಲಿಕಾರ್ಜುನ ಖರ್ಗೆ ಅವರನ್ನು ಘಮಂಡಿ ಘಟಬಂಧನ್​ ನಾಯಕನನ್ನಾಗಿ ಮಾಡಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಎಂಬ ಕಾಂಗ್ರೆಸ್​ ಆರೋಪಕ್ಕೆ ತಿರುಗೇಟು ನೀಡಿದ, ಪ್ರಹ್ಲಾದ್ ಜೋಶಿ,  ಯಾರು ರಾಜಕಾರಣ ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಎಲ್ಲರಿಗೂ ಆಹ್ವಾನ ಇತ್ತು, ಸಹಜವಾಗಿ ಬಂದಿದ್ದರೇ ಚರ್ಚೆ ಆಗುತ್ತಿರಲಿಲ್ಲ. ಎಲ್ಲಿ ವೋಟ್​ ಸಿಗುತ್ತೆ ಅಲ್ಲಿಗೆ ಹೋಗುವ ವಿಚಾರ ಕಾಂಗ್ರೆಸ್ ​ನದ್ದು ಎಂದು ಕಿಡಿ ಕಾರಿದರು.