Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, March 11, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!
      ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಬಂಧನ..!
      ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
      ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ – ಆಟೋ ಚಾಲಕರ ಪರದಾಟ..!
      ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ..!
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!
      ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ; ಸಾಲರಾಮಯ್ಯ ಎಂದ ಬಿಜೆಪಿಗೆ ತಿರುಗೇಟು – ಪ್ರಿಯಾಂಕ್ ಖರ್ಗೆ
      ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ – ಬಿ.ವೈ. ವಿಜಯೇಂದ್ರ
      ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ; ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ..!
      ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು – ಸಿಎಂ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!
  • ರಾಜ್ಯ
  • ರಾಷ್ಟ್ರೀಯ
  • ಸುದ್ದಿ ಜಾಲ

ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!

November 12, 2025
0
Share
WhatsApp
Telegram
Facebook
Twitter
Email

    ಕೋಲಾರ : ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಸಾಕಷ್ಟು ಕುತೂಹಲಗಳ ನಡುವೆ ಮುಗಿದಿದ್ದು, ಸತತವಾಗಿ ಹನ್ನೆರಡು ಗಂಟೆಗಳ ಕಾಲ ನಡೆದ ಮರು ಎಣಿಕೆ ಕಾರ್ಯದಲ್ಲಿ ಅಭ್ಯರ್ಥಿಗಳಿಗೆ ಇದ್ದ ಗೊಂದಲವನ್ನು ಬಹುತೇಕ ನಿವಾರಣೆ ಮಾಡಲಾಗಿದೆ. ಕಳೆದ ಫಲಿತಾಂಶವೇ ಯತಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆಯಿದೆ.

    ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಮರು ಮತ ಎಣಿಕೆ ಕೋರಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಎರಡೂವರೆ ವರ್ಷಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ಮರು ಎಣಿಕೆಗೆ ಆದೇಶ ಮಾಡಿ ನಂತರ ಹಾಲಿ ಶಾಸಕರನ್ನು ಅಸಿಂಧು ಮಾಡಿತ್ತು. ಅಸಿಂಧು ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಶಾಸಕ ನಂಜೇಗೌಡ ಅವರಿಗೆ ಅಸಿಂಧು ಆದೇಶ ತಡೆಯಾಜ್ಞೆ ನೀಡಿ ಮರು ಎಣೆಕೆಗೆ ಆದೇಶಿಸಿತ್ತು.

    ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾ ಚುನಾವಣಾಧಿಕಾರಿ ನೇತೃತ್ವದಲ್ಲಿ ಮರು ಎಣಿಕೆ ಕಾರ್ಯ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮರು ಎಣಿಕೆ ಕಾರ್ಯ ಸತತವಾಗಿ ರಾತ್ರಿ 8 ಗಂಟೆವರೆಗೆ ನಡೆಯಿತು. ಮೊದಲು ಪೋಸ್ಟಲ್ ಬ್ಯಾಲೆಟ್ ಎಣಿಕೆ ಮಾಡಿ ನಂತರ ಇವಿಎಂಗಳ ಎಣಿಕೆ ಕಾರ್ಯ ನಡೆಯಿತು. ಅಭ್ಯರ್ಥಿಗಳ ಸಮ್ಮುಖದಲ್ಲಿ ಅವರ ಎಲ್ಲಾ ಗೊಂದಲ ಅನುಮಾನಗಳನ್ನು ಪರಿಹರಿಸಿದ ನಂತರ ಎಣಿಕೆ ಕಾರ್ಯ ನಡೆಸಲಾಗುತ್ತಿತ್ತು.

    ರಾಜ್ಯ ಚುನಾವಣಾ ಆಯೋಗ ಮತ ಎಣಿಕೆ ಮೇಲೆ ಹದ್ದಿನ ಕಣ್ಣಿಟ್ಟು ಪ್ರತಿ ಸುತ್ತಿನ ಎಣಿಕೆಯ ಮಾಹಿತಿ ಪಡೆಯುತ್ತಿತ್ತು. ರಾಜ್ಯ ಚುನಾವಣಾ ಆಯೋಗದ ಸೂಚನೆ ನಂತರವೇ ಪ್ರತಿ ಸುತ್ತಿನ ಎಣಿಕೆ ಕಾರ್ಯ ಮಾಡಲಾಗಿದೆ. ಹದಿನಾಲ್ಕು ಟೇಬಲ್‌ಗಳಲ್ಲಿ ಒಟ್ಟು 18 ಸುತ್ತಿನ ಮತ ಎಣೆಕೆ ಕಾರ್ಯ ಮಾಡಿ ಮುಗಿಸಲಾಗಿದೆ. ಸದ್ಯ ಎಣಿಕೆಯ ನಂತರ ಪೋಸ್ಟಲ್ ಬ್ಯಾಲೆಟ್‌ನಲ್ಲಿ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

    ಎಣಿಕೆ ನಂತರ ಪ್ರತಿಕ್ರಿಯೆ ನೀಡಿದ ಶಾಸಕ ನಂಜೇಗೌಡ, ಇಂದಿನ ಎಣಿಕೆ ಕಾರ್ಯ ಸಂತೋಷ ತಂದಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೆ ನ್ಯಾಯ ಸಿಕ್ಕಿದೆ. ಎರಡೂವರೆ ವರ್ಷಗಳ ಕಾಲ ನನಗಾದ ನೋವಿಗೆ ಪರಿಹಾರ ಸಿಕ್ಕಿದೆ ಎಂದರು.

    ಇನ್ನು ಮರು ಎಣಿಕೆಗಾಗಿ ಎರಡೂವರೆ ವರ್ಷಕಾಲ ನಿರಂತರವಾಗಿ ಕೋರ್ಟ್‌ನಲ್ಲಿ ಹೋರಾಟ ಮಾಡಿದ್ದ ಮಾಲೂರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಇಂದು ಅವರ ಸಾಕಷ್ಟು ಬೆಂಬಲಿಗರು ಹಾಗೂ ವಕೀಲರೊಂದಿಗೆ ಮರು ಎಣಿಕೆ ಕೇಂದ್ರಕ್ಕೆ ಬಂದಿದ್ದರು. ಮರು ಎಣಿಕೆ ನಂತರ ಮಾಜಿ ಶಾಸಕ ಮಂಜುನಾಥಗೌಡ ಪ್ರತಿಕ್ರಿಯೆ ನೀಡಿ, ನನಗೆ ಇನ್ನೂ ಸಮಾಧಾನ ಆಗಿಲ್ಲ, ಇನ್ನೂ ಕೆಲವೊಂದು ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳ ಪ್ರೊಸೀಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್‌ಗಳನ್ನು ಎಣಿಸಬೇಕಿತ್ತು.

    ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಿದೆ. ಚುನಾವಣೆ ಮರುಎಣಿಕೆ ವಿರುದ್ಧ ನನ್ನ ಕಾನೂನು ಹೋರಾಟ ಮುಂದುವರೆಯಲಿದೆ. ಸುಪ್ರೀಂ ಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿತ್ತು. ಆದರೆ ಕೆಲವೊಂದು ನನ್ನ ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ. ನನ್ನ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

    ಒಟ್ಟಾರೆ ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಿದೆ. ನವೆಂಬರ್ 24ರಂದು ಮರು ಎಣಿಕೆಯ ಫಲಿತಾಂಶ ಹೊರಬೀಳಲಿದೆ.

    • ಟ್ಯಾಗ್ಗಳು
    • concludes
    • confidential
    • Kolar
    • KY Nanjegowda
    • Malur
    • Malur recount
    • Manjunath Gowda
    • report
    • results
    • submitted
    • supreme court
    • Vote Recount
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಫರಿದಾಬಾದ್‌ ಪ್ರಕರಣ;‌ ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಅರೆಸ್ಟ್‌
      ಮುಂದಿನ ಲೇಖನಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ ಎಚ್ಚರಿಕೆ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!

      ಸುದ್ದಿ ಜಾಲ

      ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಬಂಧನ..!

      ರಾಜ್ಯ

      ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!

      EDITOR PICKS

      ಇಂದು ಭಾರತದಲ್ಲಿ ಸ್ಯಾಮ್ ​ಸಂಗ್ ಗ್ಯಾಲಕ್ಸಿ M33 5G ಫೋನ್ ಬಿಡುಗಡೆ

      Saval - July 7, 2023

      ಶಿವಸೇನೆಯ 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

      Saval - October 23, 2024

      ಯುಎಇನಲ್ಲಿ ಏಷ್ಯಾ ಕಪ್: ಆಗಸ್ಟ್‌ 27ರಿಂದ ಟೂರ್ನಿ ಆರಂಭ

      Saval - July 28, 2022

      ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಅಪಹರಿಸಿ ಉಗ್ರರಿಂದ ಹತ್ಯೆ

      Saval - November 8, 2024
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies