ಮನೆ ಅಪರಾಧ ವ್ಯಕ್ತಿಗೆ ಚಾಕು ಇರಿದು, ಕಾರ್​ ಗ್ಲಾಸ್ ಒಡೆದು ಪುಂಡಾಟ: ಓರ್ವನ ಬಂಧನ

ವ್ಯಕ್ತಿಗೆ ಚಾಕು ಇರಿದು, ಕಾರ್​ ಗ್ಲಾಸ್ ಒಡೆದು ಪುಂಡಾಟ: ಓರ್ವನ ಬಂಧನ

0

ಬೆಂಗಳೂರು: ಹವಾ ಮೇಂಟೇನ್ ಮಾಡಬೇಕೆಂದು ಓರ್ವನಿಗೆ ಚಾಕು ಇರಿದು ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದಿದ್ದ ಆರೋಪಿಯ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ.

Join Our Whatsapp Group

ರೌಡಿಶೀಟರ್ ನರಸಿಂಹ‌ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು.

ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ.

ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ನರಸಿಂಹ ಏರಿಯಾದಲ್ಲಿ ಹವಾ ಮೇಂಟೆನ್ ಮಾಡಬೇಕು, ಪೊಲೀಸರಿಗೆ ತನ್ನ ಬಗ್ಗೆ ಮಾಹಿತಿ ಕೊಡುವವರಿಗೆ ಬುದ್ಧಿ ಕಲಿಸಬೇಕು ಎಂದು ನಿರ್ಧರಿಸಿದ್ದ. ಹಾಗಾಗಿ ಏಪ್ರಿಲ್ 25ರ ರಾತ್ರಿ ಗಿರಿ ನಗರದಲ್ಲಿದ್ದ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗ್ತಿದ್ದ ವೆಂಕಟೇಶ್ ಎಂಬಾತನಿಗೆ ಚಾಕು ಇರಿದಿದ್ದಾನೆ. ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅದೇ ದಿನ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆಯಲ್ಲಿ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದ ನರಸಿಂಹ, ಕಾಂತರಾಜು ಮತ್ತು ಯೋಗೇಶ್ ಟೀಂ ಕಾರು ಚಾಲಕ ನಿತೀಶ್ ಎಂಬಾತನಿಗೆ ಮನ ಬಂದಂತೆ ಥಳಿಸಿದ್ದಾರೆ. ಅಷ್ಟೇ ಅಲ್ಲ, ಗಾಂಜಾ ನಶೆಯಲ್ಲಿದ್ದ ಆರೋಪಿಗಳು ರಾಡ್​ನಿಂದ ಕಾರ್ ಗ್ಲಾಸ್​ಗಳನ್ನು ಒಡೆದು ಪುಡಿ ಪುಡಿ ಮಾಡಿಅಟ್ಟಹಾಸ ಮೆರೆದಿದ್ದಾರೆ.

ಘಟನೆ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಮತ್ತು ಐಪಿಸಿ ಸೆಕ್ಷನ್ 324 ಅಡಿಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳಾದ ನರಸಿಂಹ ಮತ್ತು ಕಾಂತರಾಜು ಇಬ್ಬರನ್ನು ಬಂಧಿಸಲಾಗಿದ್ದು, ಯೋಗೇಶ್ ಅಲಿಯಾಸ್ ಯೋಗಿ ಸೇರಿದಂತೆ ಮತ್ತೆ ಮೂವರಿಗಾಗಿ ಬಲೆ ಬೀಸಿದ್ದಾರೆ.

ಹಿಂದಿನ ಲೇಖನಕಾಂಗ್ರೆಸ್’ನ 4 ಗ್ಯಾರಂಟಿ ಘೋಷಣೆ ಈಡೇರಿಸದಿದ್ದರೆ ಮತ್ತೆ ಮತ ಕೇಳಲ್ಲ: ಡಿ.ಕೆ.ಶಿವಕುಮಾರ್
ಮುಂದಿನ ಲೇಖನಮೈಸೂರಿನಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ: ವಿ.ಶ್ರೀನಿವಾಸ್ ಪ್ರಸಾದ್