ಮನೆ ರಾಜ್ಯ ಮಂಡ್ಯ: ಮನೆಯಲ್ಲಿ ಕಟ್ಟಿದ್ದ ಕರು ಮೇಲೆ ಚಿರತೆ ದಾಳಿ

ಮಂಡ್ಯ: ಮನೆಯಲ್ಲಿ ಕಟ್ಟಿದ್ದ ಕರು ಮೇಲೆ ಚಿರತೆ ದಾಳಿ

0

ಮಂಡ್ಯ: ಮನೆಯಲ್ಲಿ ಕಟ್ಟಿದ್ದ ಕರು ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೋಮ್ಮೇನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳೆಗಿನ ಜಾವ ಗ್ರಾಮದ ರೈತ ಪುಟ್ಟರಾಜು ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ದಾಳಿ ಚಿರತೆ ದಾಳಿ ಮಾಡಿ ಮಾಡಿ ಕುತ್ತಿಗೆ ಭಾಗ ತಿಂದಿದೆ. ಕರು ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ.

ಪದೇ ಪದೇ ಚಿರತೆಗಳು ಗ್ರಾಮದ ಸುತ್ತಮುತ್ತಲಿನಲ್ಲಿ ಪ್ರತ್ಯಕ್ಷವಾಗುತ್ತಿದ್ದು, ಗ್ರಾಮದಲ್ಲಿ ಮಕ್ಕಳು, ಮಹಿಳೆಯರು ಓಡಾಡಲು ಭಯಭೀತರಾಗಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ತಕ್ಷಣವೇ ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹಿಂದಿನ ಲೇಖನಆದಾಯ ತೆರಿಗೆ ಇಲಾಖೆಯಲ್ಲಿ 01 ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ
ಮುಂದಿನ ಲೇಖನಮಂಡ್ಯ: ಜಮೀನಿನ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ