ಮನೆ ಅಪರಾಧ ಮಂಡ್ಯ: ಕಾಲು ಜಾರಿ ಕೆರೆಗೆ ಬಿದ್ದು ರೈತ ಸಾವು

ಮಂಡ್ಯ: ಕಾಲು ಜಾರಿ ಕೆರೆಗೆ ಬಿದ್ದು ರೈತ ಸಾವು

0

ಮಂಡ್ಯ: ಹನಕೆರೆ ಕೆರೆಯಲ್ಲಿ ಕಾಲು ತೊಳೆಯಲು ಇಳಿದಿದ್ದ ರೈತ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.

Join Our Whatsapp Group

ಹೆಚ್.ಎಸ್.ಅನಿಲ್ (30) ಮೃತ ರೈತ.

ಗದ್ದೆಯಲ್ಲಿ ಭತ್ತದ ನಾಟಿ ಮಾಡಲು ಭೂಮಿ ಹದಗೊಳಿಸಿ‌ ಮನೆಗೆ ತೆರಳುವಾಗ ಕೈ ಕಾಲು ತೊಳೆಯಲು ಕೆರೆಗೆ ಇಳಿದಿದ್ದಾರೆ.  ಬೇಸಿಗೆಯಲ್ಲಿ ಕೆರೆಯಲ್ಲಿ‌ ಮಣ್ಣು  ತುಂಬಿ ಗುಂಡಿ ಬಿದ್ದ ಹಿನ್ನೆಲೆ ರೈತ ನೀರಿನಲ್ಲಿ‌ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತ ದೇಹ ಸಿಗದ ಹಿನ್ನೆಲೆ  ಆಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದೇಹ ಪತ್ತೆ ಹಚ್ಚಿ ಹೊರ ತೆಗೆದಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಆಗಮಿಸಿ ಪೊಲೀಸರು ಮಹಜರು ನಡೆಸಿದ್ದಾರೆ. ಶವವನ್ನು ಮಂಡ್ಯ ಮಿಮ್ಸ್ ಗೆ ಶವಗಾರಕ್ಕೆ ರವಾನಿಸಲಾಗಿದೆ.