ಮನೆ ಅಪರಾಧ ಮಂಡ್ಯ: ಚಿತ್ರ ನಿರ್ಮಾಪಕರ ಮನೆಯಲ್ಲಿ ಚಿನ್ನಾಭರಣ, ನಗದು ಕಳ್ಳತನ

ಮಂಡ್ಯ: ಚಿತ್ರ ನಿರ್ಮಾಪಕರ ಮನೆಯಲ್ಲಿ ಚಿನ್ನಾಭರಣ, ನಗದು ಕಳ್ಳತನ

0

ಮಂಡ್ಯ: ಚಿತ್ರ ನಿರ್ಮಾಪಕರೊಬ್ಬರ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ-ನಗದು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ನಡೆದಿದೆ.

ಚಂದ್ರಶೇಖರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.

ಚಿತ್ರ ನಿರ್ಮಾಪಕ ಚಂದ್ರಶೇಖರ್ ಬೆಂಗಳೂರಿನಲ್ಲಿ ವಾಸವಾಗಿದ್ದರು. ವಾರಾಂತ್ಯದಲ್ಲಿ ಹೊಸ ಬೂದನೂರು ಗ್ರಾಮಕ್ಕೆ ಬಂದು ಒಂದೆರಡು ದಿನ ವಾಸ್ತವ್ಯ ಮಾಡಿ ತೆರಳುತ್ತಿದ್ದರು.

ಕಳೆದ ಶನಿವಾರ ಮನೆಯಿಂದ ಬೆಂಗಳೂರಿಗೆ ತೆರಳಿದ ಬಳಿಕ ಕಳ್ಳತನ ನಡೆದಿದೆ.

ಮನೆಯ ಒಳ ನುಗ್ಗಿ ಸುಮಾರು 3 ಲಕ್ಷ ಮೌಲ್ಯದ ನಗದು, 35 ಗ್ರಾಂ ಚಿನ್ನಾಭರಣ ದೋಚಿರುವ ಜೊತೆಗೆ, ಸಿಸಿ ಕ್ಯಾಮರಾದ ಡಿವಿಡಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ‌ ಪೊಲೀಸರು ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಅಕ್ರಮ ಮರಳು ದಂಧೆ ಅಡ್ಡೆ ಮೇಲೆ ದಾಳಿ ನಡೆಸಿದ ಮೈನಿಂಗ್ ಅಧಿಕಾರಿಗಳ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ: ಓರ್ವನಿಗೆ ಗಂಭೀರ ಗಾಯ
ಮುಂದಿನ ಲೇಖನಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’​ ಅಭಿಯಾನ