ಮಂಡ್ಯ: ಕೇಂದ್ರ ಸಚಿವ ಹೆಚ್ ಡಿಕೆ ಕುಮಾರಸ್ವಾಮಿ ಅವರು ತವರು ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ.
ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದು, ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ. ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್ಡಿ ಕುಮಾರಸ್ವಾಮಿ, “ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ ದರ್ಶನ ಕಾರ್ಯಕ್ರಮ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ನೀಡಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಡಿಮಿಡಿಗೊಂಡರು.
ಗುರುವಾರ (ಜು.05) ನಡೆದ ಕ್ಯಾಬಿನೆಟ್ನಲ್ಲಿ ಮುಖ್ಯಮಂತ್ರಿ, ಸಚಿವರಿಗೆಷ್ಟೇ ಮಾತ್ರ ಜನತಾ ದರ್ಶನ ಮಾಡುವ ಅಧಿಕಾರವಿದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳಿಗೂ ಕೂಡ ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಆರೋಪ ಮಾಡಿದರು.
ಡಿ.ಕೆ.ಸುರೇಶ್ ಸಂಸದರಾಗಿದ್ದ ಸಂದರ್ಭದಲ್ಲಿ ರಾಮನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.
ಜನಸ್ಪಂದನ ಹೆಸರಲ್ಲಿ ಅಧಿಕಾರಿಗಳನ್ನ ಹಳ್ಳಿಹಳ್ಳಿ ತಿರುಗಿಸಿದರು. ಉಸ್ತುವಾರಿ ಸಚಿವರು ಮಾಡಬೇಕಾದ ಸಭೆಗಳನ್ನು ಡಿಕೆ ಸುರೇಶ್ ಮಾಡಿದರು. ಅದಕ್ಕೆ ಅನುಮತಿ ಕೊಟ್ಟವರು ಯಾರು? ಆ ಸಂದರ್ಭದಲ್ಲಿ ಯಾವ ನಿಯಮ ಇತ್ತು? ಇವತ್ತು ಕೇಂದ್ರದ ಒಬ್ಬ ಮಂತ್ರಿ ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ, ಹೊಸ ನಿಯಾಮವಳಿ ಮೂಲಕ ತಡೆಯಲು ಮುಂದಾಗಿದ್ದಾರೆ. ಇದು ನನ್ನ ಮನೆಯ ಕಾರ್ಯಕ್ರಮವಲ್ಲ. ಇದರಿಂದ ಅವರಿಗೆ ಏನು ದೊರಕಲ್ಲ ಎಂದು ವಾಗ್ದಾಳಿ ಮಾಡಿದರು.
ಮಧ್ಯ ಕೂಟನಡೆಸಿ ಕೃತಜ್ಞತೆ ಸಲ್ಲಿಸಿದ ಬಿಜೆಪಿ ಸಂಸದ ಕೆ ಸುಧಾಕರ್!
ಜೋಗದ ಗುಂಡಿಯಲ್ಲಿ ಧುಮ್ಮಕ್ಕುತ್ತಿದೆ ಜಲಧಾರೆ
ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾಣಿಗಳಲ್ಲಿರುವ ಪ್ರೀತಿ ಮತ್ತು ಒಗ್ಗಟ್ಟುನು ಒಮ್ಮೆ ನೋಡಿ
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.