ಮನೆ ಅಪರಾಧ ಮಂಡ್ಯ: ಕೆರೆಯಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ  ಪತ್ತೆ

ಮಂಡ್ಯ: ಕೆರೆಯಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ  ಪತ್ತೆ

0

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದ ಕೆರೆಯಲ್ಲಿ  ಅನುಮಾನಾಸ್ಪದವಾಗಿ ಯುವಕನ ಶವ  ಪತ್ತೆಯಾಗಿದೆ.

ರಾಮನಗರ ಜಿಲ್ಲೆ ಬೈರಮಂಗಲ ಗ್ರಾಮದ ನಿವಾಸಿ ರಾಮ್ ಕುಮಾರ್ (23) ಮೃತಪಟ್ಟ ಯುವಕ.

ಮೃತ ಯುವಕ ಕಾಣೆಯಾಗಿರುವ ಬಗ್ಗೆ ಮದ್ದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ರಾಮ್ ಕುಮಾರ್ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸ್ನೇಹಿತ ಜೊತೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗಮಧ್ಯೆ ಘಟನೆ ನಡೆದಿದೆ ಎನ್ನಲಾಗಿದೆ. ಬೆಂ-ಮೈ ಎಕ್ಸ್ಪ್ರೆಸ್ ಹೈವೆಯ ರುದ್ರಾಕ್ಷಿಪುರ ಸಮೀಪದ ಕೆರೆ ಬಳಿ ಮೂತ್ರ ವಿಸರ್ಜನೆಗೆ ಬೈಕ್ ಗಳನ್ನು ನಿಲ್ಲಿಸಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ರಾಮ್ ಕುಮಾರ್, ಬಸವರಾಜು ಹಾಗೂ ಪ್ರದೀಪ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದರು. ಈ ವೇಳೆ ಬಸವರಾಜು ದುಷ್ಕರ್ಮಿಗಳಿಂದ ರಕ್ಷಣೆಗಾಗಿ  ಹೆದ್ದಾರಿ ದಾಟಿ ಪರಾರಿಯಾಗಿದ್ದನು.  ಪ್ರದೀಪ್ ಹಾಗೂ ರಾಮ್ ಕುಮಾರ್ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿತ್ತು ಎಂದು ಮೃತ ಯುವಕನ ಸ್ನೇಹಿತ ತಿಳಿಸಿದ್ದಾನೆ.

ಘಟನೆ ನಂತರ ಹೆದ್ದಾರಿ ಗಸ್ತು ವಾಹನ ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ಗಾಯಗೊಂಡಿದ್ದ ಪ್ರದೀಪ್ ಘಟನೆ ಬಗ್ಗೆ ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಕೆರೆ ಬಳಿ ಪರಿಶೀಲನೆ ನಡೆಸಿದಾಗ ಯಾವುದೇ ಶವ ಕಂಡು ಬಂದಿರಲಿಲ್ಲ.  ವಿಚಾರಣೆ ನಡೆಸಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.

ಬಳಿಕ ಕೆರೆಯಲ್ಲಿ ಮೃತ ಯುವಕನ ಶವ ಪತ್ತೆಯಾಗಿದ್ದು, ಮೃತ ಯುವಕ ರಾಮ್ ಕುಮಾರ್ ಕೊಲೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನಿಸಲಾಗಿದೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನTHDC: 11 ಅಕೌಂಟ್ಸ್ ಆಫೀಸರ್, ಜಿಡಿಎಂಒ ಹುದ್ದೆಗಳಿಗೆ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ
ಮುಂದಿನ ಲೇಖನತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಮೈಲಿಗೆ ಸಂಪ್ರದಾಯ: ಮಗು, ಬಾಣಂತಿಯನ್ನು ಮನೆಗೆ ಸೇರಿಸಿದ ನ್ಯಾಯಧೀಶರು