ಮನೆ ರಾಜ್ಯ ಮಂಗಳೂರು: ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು: ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎಬಿವಿಪಿ ಪ್ರತಿಭಟನೆ

0

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಿದ ಹೋರಾಟಗಾರ, ಚಿಂತಕ, ಲೇಖಕ ಬಿ.ವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮಕ್ಕೆ‌ ಎಬಿವಿಪಿ ವಿರೋಧ ವ್ಯಕ್ತಪಡಿಸಿದೆ.

ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು‌ ವಿರೋಧ ವ್ಯಕ್ತಪಡಿಸಿದ್ದಾರೆ.

ವಿರೋಧದ ನಡುವೆಯೂ ಬಿ‌ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ  ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡಲಾಗಿದೆ ಎಂದು ಆರೋಪಿಸಿದ ಎಬಿವಿಪಿ ಪ್ರತಿಭಟನೆ ನಡೆಸಿತ್ತು.

ಉಪನ್ಯಾಸ ಕಾರ್ಯಕ್ರಮಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ‌.

ಹಿಂದಿನ ಲೇಖನಆಂಧ್ರ ಪ್ರದೇಶ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಅರೆಸ್ಟ್ ಮಾಡಿದ ಸಿಐಡಿ ಅಧಿಕಾರಿಗಳು
ಮುಂದಿನ ಲೇಖನಜಿ-20 ಸಭೆಯ ನಾಮಫಲಕದಲ್ಲಿ ಇಂಡಿಯಾ ಬದಲು ಭಾರತ ಹೆಸರು ಪ್ರದರ್ಶನ