ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ.
ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.
ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.














